ಬೀದರ್: ಬೀದರ್ ಜಿಲ್ಲೆಯ ಹುಮನಾಬಾದ್ ಪುರಸಭೆಯ ನಾಲ್ಕನೇ ವಾರ್ಡ್ ನ ಜೆಡಿಎಸ್ ಅಭ್ಯರ್ಥಿ ಎಂ.ಡಿ ನಜಿಮೋದ್ದಿನ್ ರವರ ಪರ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರು, ಜೆಡಿಎಸ್ ಕೋರ್ ಕಮಿಟಿಯ ಸದಸ್ಯರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚನೆ ನಡೆಸಿದರು. ಡಿಸೆಂಬರ್ 27ರಂದು ಉಪ ಚುನಾವಣೆ ನಡೆಯಲಿರುವ ಹುಮನಾಬಾದ್ ಪಟ್ಟಣದ ವಾರ್ಡ್ ಸಂಖ್ಯೆ ನಾಲ್ಕಕ್ಕೆ ಶನಿವಾರ ಸಂಜೆ ಭೇಟಿ ನೀಡಿದ ಅವರು, ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವಾರ್ಡ್ ಸಂಖ್ಯೆ ನಾಲ್ಕರ ಅಂಗಡಿಗಳು, ಮನೆಗಳಿಗೆ ತೆರಳಿ ಜೆಡಿಎಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.
iPhone 16 ಲೈನ್ಅಪ್ ಬಗ್ಗೆ ನಿಮಗೇನು ಗೊತ್ತು?: A18 ಚಿಪ್ ಯಾಕೆ ಹಾಕ್ತಾರೆ ಗೊತ್ತಾ?
ಈ ವೇಳೆ ಮಾತನಾಡಿದ ಬಂಡೆಪ್ಪ ಖಾಶೆಂಪುರ್ ರವರು, ಜೆಡಿಎಸ್ ಪಕ್ಷ ಬಡವರ, ಶ್ರಮಿಕರ, ರೈತರ ಪಕ್ಷವಾಗಿದೆ. ಪಕ್ಷ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಜನಪರ ಕೆಲಸಗಳನ್ನು ಮಾಡಿಕೊಂಡು ಬಂದಿದೆ. ನಿರಂತರವಾಗಿ ಬಡ ಜನರ ಪರವಾಗಿ ಕೆಲಸ ಮಾಡುವ ಪಕ್ಷ ಜೆಡಿಎಸ್ ಪಕ್ಷವಾಗಿದೆ. ಹುಮನಾಬಾದ್ ಪುರಸಭೆಯ ನಾಲ್ಕನೇ ವಾರ್ಡ್ ನ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ನೀಡುವ ಮೂಲಕ ಎಂ.ಡಿ ನಜಿಮೋದ್ದಿನ್ ರವರನ್ನು ಗೆಲ್ಲಿಸಿ ಎಂದು ಮತದಾರರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಡಿ ನಜಿಮೋದ್ದಿನ್, ಪಕ್ಷದ ಪ್ರಮುಖರಾದ ಗೌತಮ್ ಸಾಗರ್, ಶಿವಪುತ್ರ ಮಾಳ್ಗೆ, ಸುರೇಶ್ ಸಿಗಿ, ಶಿವರಾಜ್ ಹುಲಿ, ಬೋಮಗೊಂಡ ಚಿಟ್ಟಾವಾಡಿ, ಯಾಶೀನ್, ಮುಜೀಬ್ ಬಾಬಾ, ಸಲ್ಮಾನ್ ತನ್ವಿರ್, ವಾಜೀದ್ ನವಾಬ್, ಸಚಿನ್ ಕಟ್ಟಿಮನಿ ಸೇರಿದಂತೆ ಅನೇಕರಿದ್ದರು.