ಮಂಗಳೂರು: ಮಂಗಳೂರಿನಲ್ಲಿ ಫುಡ್ ಪಾಯಿಸನ್ ಕೇಸ್ ಹೆಚ್ಚಳವಾಗುತ್ತಿದ್ದು, ನೀರು ಕುಡಿಯುವಾಗ ಎಚ್ಚರ ಇರಲಿ ಎಂದು ತಜ್ಞರು ಸಲಹೆ ಕೊಟ್ಟಿದ್ದಾರೆ. ಹೆಚ್ಚುತ್ತಿರುವ ಬಿಸಿಲಿನ ತಾಪ ಮತ್ತು ನೀರಿನ ಗುಣಮಟ್ಟದಲ್ಲಿನ ಬದಲಾವಣೆಗಳು ಈ ಸಮಸ್ಯೆಗೆ ಕಾರಣವಾಗಿರ ಬಹುದು ಎಂದು ಆರೋಗ್ಯ ತಜ್ಞರು ಅನುಮಾನ ವ್ಯಕ್ತಪಡಿಸಿದ್ದಾರೆ. ಮಕ್ಕಳು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಸುಮಾರು 100 ಮಂದಿ ಫುಡ್ ಪಾಯಿಸನ್ ಅಥವಾ ವಿಷಾಹಾರ ಸಮಸ್ಯೆಯಿಂದ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿರುವುದಾಗಿ ವರದಿಯಾಗಿದೆ.
ವಿವಿಧ ಕಾರಣಗಳಿಂದ ನಾವು ಸೇವಿಸುವ ಆಹಾರ ವಿಷವಾಗಿ ಪರಿಣಮಿಸುತ್ತದೆ. ಆದರೂ ಕಲುಷಿತ ನೀರು ಮುಖ್ಯ ಕಾರಣ ಎಂದು ಆಯುರ್ ಸ್ಪರ್ಶ ಆಸ್ಪತ್ರೆಯ ಆಹಾರ ಮತ್ತು ಪೌಷ್ಟಿಕಾಂಶ ತಜ್ಞೆ ಸೌಜನ್ಯ ಸತೀಶ್ ಶಂಕರ್ ವಿವರಿಸಿದ್ದಾರೆ. ತಾಪಮಾನ ಪ್ರಮಾಣ ಹೆಚ್ಚುತ್ತಿರುವಾಗ ಹೆಚ್ಚು ನೀರನ್ನು ಸೇವಿಸುವುದು ಅತ್ಯಗತ್ಯ. ಆದರೆ ಅದರ ಶುದ್ಧತೆಯನ್ನು ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಒಂದೇ ರೂಂನಲ್ಲಿ ಗಂಡ-ಹೆಂಡತಿ, ಸ್ನೇಹಿತೆಯ ನಿಗೂಢ ಸಾವು: ವಾಮಾಚಾರಕ್ಕೆ ಬಲಿಯಾದ್ರಾ..?
ಕಲುಷಿತ ನೀರು ಸೇವನೆ ಮುಖ್ಯ ಕಾರಣವಾಗುತ್ತದೆ. ಇಷ್ಟೇ ಅಲ್ಲದೆ, ಆಹಾರದಲ್ಲಿರುವ ಕಲ್ಮಶಗಳು, ಆಹಾರದಲ್ಲಿನ ಬ್ಯಾಕ್ಟೀರಿಯಾ ಮತ್ತು ವೈರಸ್ಗಳು, ಅವಧಿ ಮೀರಿದ ಅಥವಾ ಬೇಯಿಸದ ಆಹಾರದ ಬಳಕೆ, ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ದೀರ್ಘಾವಧಿಯ ಆಹಾರ ಸಂಗ್ರಹಣೆ, ಹಾಳಾದ ಹಣ್ಣುಗಳು ಮತ್ತು ತರಕಾರಿಗಳನ್ನು ತಿನ್ನುವುದು ಮತ್ತು ಹೆಚ್ಚು ಸಂಸ್ಕರಿಸಿದ ಆಹಾರಗಳ ಸೇವನೆಯೂ ವಿಷಾಹಾರಕ್ಕೆ ಕಾರಣವಾಗತ್ತವೆ. ಮನೆಯಲ್ಲಿ ಚೆನ್ನಾಗಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಸಮಸ್ಯೆಯನ್ನು ತಡೆಗಟ್ಟಬಹುದಾಗಿದೆ.
ಜ್ವರ, ವಾಂತಿ, ಅತಿಸಾರ, ತಲೆನೋವು ಮತ್ತು ಹೊಟ್ಟೆ ನೋವು, ಕೆಲವೊಮ್ಮೆ ಚರ್ಮದ ದದ್ದುಗಳು ಮತ್ತು ತುರಿಕೆಗಳು ಫುಡ್ ಪಾಯಿಸನ್ನ ಪ್ರಮುಖ ಲಕ್ಷಣಗಳಾಗಿವೆ. ಕೆಲವು ಮನೆಮದ್ದುಗಳು ಫುಡ್ ಪಾಯಿಸನ್ ಲಕ್ಷಣಗಳನ್ನು ಸ್ವಲ್ಪ ಮಟ್ಟಿಗೆ ನಿವಾರಿಸಬಹು ದಾದರೂ, ಯಾವುದೇ ಪ್ರತಿಕೂಲ ಪರಿಣಾಮಗಳನ್ನು ತಡೆಗಟ್ಟಲು ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ಜೀರಿಗೆಯನ್ನು ಜಗಿಯುವುದು ಅಥವಾ ಜೀರಿಗೆ ಪುಡಿಯನ್ನು ಸೇವಿಸುವುದರಿಂದ ರೋಗಲಕ್ಷಣಗಳನ್ನು ನಿವಾರಿಸಲು ಪ್ರಯೋಜನವಾಗಬಹುದು.