ರಾಮನಗರ: ಬಿಜೆಪಿ-ಜೆಡಿಎಸ್ ಕಾರ್ಯಕರ್ತರನ್ನು ಶಿಕಾರಿ ಮಾಡಿ, ಒಬ್ಬ ಮುಖಂಡ ಕನಿಷ್ಠ 10 ಮಂದಿಯನ್ನು ಪಕ್ಷಕ್ಕೆ ಕರೆತನ್ನಿ ಎಂದು ಪಕ್ಷದ ಕಾರ್ಯಕರ್ತರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಟಾಸ್ಕ್ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಡಿಕೆಶಿ, ಬಿಜೆಪಿ-ಜೆಡಿಎಸ್ ಕಾರ್ಯಕರ್ತರನ್ನ ಶಿಕಾರಿ ಮಾಡಿ. ಒಬ್ಬೊಬ್ಬ ಮುಖಂಡ ಕನಿಷ್ಠ ಹತ್ತು ಮಂದಿಯನ್ನ ಪಕ್ಷಕ್ಕೆ ಕರೆತರಬೇಕು. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಬೇಸತ್ತವರನ್ನ ಕಾಂಗ್ರೆಸ್ಗೆ ಕರೆತನ್ನಿ ಎಂದು ಸೂಚನೆ ನೀಡಿದ್ದಾರೆ.
ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕುಮಾರಸ್ವಾಮಿ ಭೇಟಿ ಸುದ್ದಿಯಾಗದಂತೆ ತಡೆ: ಜೆಡಿಎಸ್ ಆಕ್ರೋಶ
ನನಗೆ ಚನ್ನಪಟ್ಟಣದಲ್ಲಿ ನಿಲ್ಲಬೇಕೆಂಬ ಆಸೆ ಇದೆ. ಆದರೆ ಪಾರ್ಟಿಯವರು ಬೇಡ ಅಂತಿದ್ದಾರೆ. ನೀನು ಕೆಪಿಸಿಸಿ ಅಧ್ಯಕ್ಷ, ಕನಕಪುರ ಎಂಎಲ್ಎ ಇದ್ದೀಯ. ನೀನು ಮತ್ತೆ ನಿಲ್ಲೋದು ಬೇಡ ಎನ್ನುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಅಭ್ಯರ್ಥಿ ಯಾರೇ ಆಗಲಿ, ಡಿಕೆಶಿನೇ ಅಭ್ಯರ್ಥಿ ಎಂದು ಚುನಾವಣೆಯಲ್ಲಿ ಪ್ರಚಾರ ಮಾಡಿ ಎಂದು ಕಾರ್ಯಕರ್ತರಿಗೆ ಡಿಕೆಶಿ ಸಲಹೆ ನೀಡಿದ್ದಾರೆ.
ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದೆ. ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸದ್ದಿಲ್ಲದೇ ತಯಾರಿ ನಡೆಸುತ್ತಿದೆ. ಮೈತ್ರಿ ನಾಯಕರ ಒಳಜಗಳದ ಲಾಭ ಪಡೆಯಲು ಮುಂದಾಗಿರುವ ಕಾಂಗ್ರೆಸ್, ಸಾಲು ಸಾಲು ಸಭೆಗಳನ್ನ ನಡೆಸಿ ಪಕ್ಷ ಸೇರ್ಪಡೆ ಕಾರ್ಯಕ್ರಮಗಳನ್ನ ನಡೆಸುತ್ತಿದೆ.