ಚಾಮರಾಜನಗರ : ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ ಹೀಯ್ಯಾಳಿಸುತ್ತಿದ್ದರಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ಘಟನೆ ನಡೆದಿದೆ.
ಪರಶಿವ (32) ಆತ್ಮಹತ್ಯೆ ಮಾಡಿಕೊಂಡ ಪತಿಯಾಗಿದ್ದು, ಆಕೆಯ ಪತ್ನಿಯು ಯಾವಾಗಲೂ ನೀನು ಚನ್ನಾಗಿಲ್ಲ, ನನಗೆ ಸರಿಯಾದ ಜೋಡಿಯಲ್ಲ ಎಂದು ಎಲ್ಲರ ಎದುರೇ ಅವಮಾನ ಮಾಡುತ್ತಿದ್ದಳು. ಅಲ್ಲದೇ ತನ್ನ ಹೈಫೈ ಲೈಫ್, ರೀಲ್ಸ್ ಗೀಳು ಕೂಡ ಇತ್ತು.
ಫುಡ್ ಫಾಯ್ಸನ್ನಿಂದ ವಿದ್ಯಾರ್ಥಿ ಸಾವು ಪ್ರಕರಣ ; ವಸತಿ ಶಾಲೆ ಆಡಳಿತ ಮಂಡಳಿ ವಿರುದ್ಧ ಕೇಸ್
ಇದಕ್ಕೋಸ್ಕರ ಒಳ್ಳೆ ಬಟ್ಟೆ ಕೊಡಿಸು, ಆಭರಣ ಕೊಡಿಸು, ಬೇರೆಮನೆ ಮಾಡು ಎಂದು ಪತ್ನಿ ಪತಿಗೆ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ದಳು ಎನ್ನಲಾಗಿದೆ. ಅದಷ್ಟೇ ಅಲ್ಲದೇ ಸುಳ್ಳು ವರದಕ್ಷಿಣೆ ಕೇಸ್ ಹಾಕಿ ಪತಿಯನ್ನು ಒಂದೂವರೆ ತಿಂಗಳು ಜೈಲಿಗೆ ಕೂಡ ಕಳಿಸಿದ್ದಳು. ಪತ್ನಿಯ ಕಿರುಕುಳದಿಂದ ಬೇಸತ್ತು ಪತಿ ಪರಶಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.