ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯೊಬ್ಬಳು ತನ್ನ 5 ವರ್ಷದ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ.
ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟವಾಡಲು ಹೊರಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್ನೋಟ್ ಬರೆದಿಟ್ಟಿದ್ದು, ಡೆತ್ನೋಟ್ನಲ್ಲಿ ಗಂಡ ಪರಸ್ತ್ರಿಯೊಂದಿಗಿನ ಅನೈತಿಕ ಸಂಬಂಧದ ಹೊಂದಿರುವ ಬಗ್ಗೆ ಉಲ್ಲೇಖಿಸಿದ್ದಾರೆ.
ಸಂಪತ್ತು ನಿಮ್ಮನ್ನು ಹುಡುಕಿಕೊಂಡು ಬರಬೇಕಾ.? ಹಾಗಿದ್ರೆ ಈ ದಿನಗಳಲ್ಲಿ ಪೊರಕೆ ಖರೀದಿಸಬಾರದು.!
10 ವರ್ಷದ ಹಿಂದೆ ಶ್ರುತಿ ಚಾರ್ಟರ್ಡ್ ಅಕೌಂಟೆಂಟ್ ಜತೆ ಮದುವೆಯಾಗಿದ್ದರು. ಅಲ್ಲದೇ ಶ್ರುತಿ ಗ್ರಾಮ ಪಂಚಾಯಿತಿ ಒಂದರ ಅಧ್ಯಕ್ಷೆಯಾಗಿದ್ದು, ಒಂದು ಹೆಣ್ನು ಒಂದು ಗಂಡು ಮಗು ಸಹ ಇದೆ. ಆದ್ರೆ, ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಶ್ರುತಿ, ಪುತ್ರಿ ರೋಹಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣಿಗೆ ಶರಣಾಗಿದ್ದಾರೆ. ಇನ್ನು ಗಂಡು ಮಗು ಆಟವಾಡಲು ಮನೆಬಿಟ್ಟು ಆಚೆ ಹೋಗಿದ್ದರಿಂದ ಆ ಕಂದ ಬಚಾವ್ ಆಗಿದೆ.
ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.