ರಾಮನಗರ:- ನಾವು ಯಾರಿಗೂ ವಿಷ ಹಾಕುವವರಲ್ಲ ಎಂದು ಹೇಳುವ ಮೂಲಕ ಹೆಚ್ಡಿಕೆಗೆ ಡಿಕೆ ಸುರೇಶ್ ತಿರುಗೇಟು ಕೊಟ್ಟಿದ್ದಾರೆ.
ದೇವೇಗೌಡರ ಬದುಕಿಗೆ ವಿಷ ಹಾಕಿದ್ದೇ ಡಿ.ಕೆ.ಬ್ರದರ್ಸ್ ಎಂಬ ಮಾಜಿ ಸಿಎಂ ವಾಗ್ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಯಾರಿಗೂ ವಿಷ ಹಾಕುವವರಲ್ಲ. ನಾನು ಎಲ್ಲರಿಗೂ ಒಳ್ಳೆಯದನ್ನ ಬಯಸುವವರು. ಅವರು ಏನು ಮಾತನಾಡಿದ್ದಾರೋ ಗೊತ್ತಿಲ್ಲ. ಅವರ ಆರೋಗ್ಯ ಚೆನ್ನಾಗಿಲ್ಲ ಅಂತ ಆಸ್ಪತ್ರೆಗೆ ಹೋಗ್ತಿದ್ದಾರೆ. ಆದಷ್ಟು ಬೇಗ ಆಸ್ಪತ್ರೆಯಿಂದ ಗುಣಮುಖರಾಗಿ ಬರಲಿ ಅಂತ ದೇವರಲ್ಲಿ ಪ್ರಾರ್ಥನೆ ಮಾಡ್ತೀನಿ ಎಂದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಹಂಚಿಕೆ ಆರೋಪದ ಕುರಿತು ಮಾತನಾಡಿ, ಈ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಕುಮಾರಸ್ವಾಮಿ ಏನೇನ್ ಹೇಳ್ತಾರೋ ಗೊತ್ತಿಲ್ಲ. ಅವರಿಗೆ ಆಪರೇಷನ್ ಆಗಬೇಕು ಅಂತ ಆಸ್ಪತ್ರೆಗೆ ಹೋಗ್ತಿದ್ದಾರೆ, ಒಳ್ಳೆದಾಗ್ಲಿ ಎಂದರು