ಬೆಂಗಳೂರು: ಕೇಂದ್ರದ ನೂತನ ಸರ್ಕಾರದಲ್ಲಿ ರಾಜ್ಯದಿಂದ ಐವರು ಕೇಂದ್ರ ಸಚಿವರಾಗಿದ್ದಾರೆ. ಅವರಿಗೆಲ್ಲ ಅಭಿನಂದನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರದ ನೂತನ ಸರ್ಕಾರದಲ್ಲಿ ರಾಜ್ಯದಿಂದ ಐವರು ಕೇಂದ್ರ ಸಚಿವರಾಗಿದ್ದಾರೆ. ಅವರಿಗೆಲ್ಲ ಅಭಿನಂದನೆ. ರಾಜ್ಯದಲ್ಲಿ ಜ್ವಲಂತ ಸಮಸ್ಯೆಗಳಿವೆ. ನಮಗೆ ಜಿಎಸ್ಟಿ ಬಾಕಿ ಬರಬೇಕಿದೆ. ಹಲವು ನೀರಾವರಿ ಯೋಜನೆಗಳ ಅನುಮತಿ ಬೇಕಿದೆ. ಅನೇಕ ಸವಾಲುಗಳು ಈ ಐವರ ಮುಂದಿದೆ. ಇದನ್ನೆಲ್ಲ ಅದ್ಯತೆ ಮೇಲೆ ಮಾಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಎರಡು ಬಾರಿ ಸಿಎಂ ಆಗಿದ್ದ ಕುಮಾರಸ್ವಾಮಿ ಈಗ ಕೇಂದ್ರದಲ್ಲಿ ಸಚಿವರಾಗಿ ಆಯ್ಕೆ ಆಗಿದ್ದಾರೆ. ಸ್ವಾಭಾವಿಕವಾಗಿ ಕೇಂದ್ರದ ಸಹಕಾರ ಇದ್ದೇ ಇರುತ್ತದೆ. ಕುಮಾರಸ್ವಾಮಿ ರಾಜ್ಯದ ಹಿತಾಸಕ್ತಿ ಕಾಪಾಡಲಿ. ಈ ಐವರು ಕೇಂದ್ರ ಸಚಿವರು ರಾಜ್ಯದ ಸಮಸ್ಯೆ ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ. ಕೇಂದ್ರದ ಮಟ್ಟದಲ್ಲಿ ಪರಿಹರಿಸುವ ವಿಶ್ವಾಸವಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ಅದು ವಿಫಲರಾದರೆ ಅವರಿಗೂ, ಅವರ ಪಕ್ಷಕ್ಕೂ ನಷ್ಟ. ಯಾರ್ಯಾರಿಗೆ ಯಾವ ಯಾವ ಖಾತೆ ಕೊಡುತ್ತಾರೆ ಎಂಬುದನ್ನು ನಾವು ಕಾದು ನೋಡುತ್ತೇವೆ. ನಮ್ಮ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಆರೋಪ ಮಾಡುತ್ತೇವೆ. ಆದರೆ ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾವಿಸುತ್ತೇವೆ ಎಂದರು.
ಕೇಂದ್ರದ ಹೊಸ ಸಂಪುಟದಲ್ಲಿ ದಲಿತ ಮತ್ತು ಹಿಂದುಳಿದ ವರ್ಗದವರನ್ನು ನಿರ್ಲಕ್ಷ್ಯ ಮಾಡಲಾಗಿದೆ. ಅವರಿಗೆ ಆ ಸಮುದಾಯದ ಸಂಸದರು ಬೇಕಾಗಿಲ್ಲ ಎನ್ನಿಸುತ್ತದೆ. ರಾಜ್ಯದಿಂದ ದಲಿತ, ಒಬಿಸಿಯವರು ಆಯ್ಕೆ ಆಗಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಬೇಕಿತ್ತು. ಈ ಎರಡೂ ಸಮುದಾಯಗಳನ್ನು ಬಿಜೆಪಿ ಕಡೆಗಣಿಸಿದೆ ಎಂದು ಕೇಂದ್ರದ ವಿರುದ್ಧ ಪರಮೇಶ್ವರ್ ಆರೋಪಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)