ಹಾಸನ : ನಾನು ಅವರಿಗೆ ಲೆಕ್ಕಕ್ಕೆ ಇದೀನಾ? ಅವರಿಗೆ ಸರಿಸಾಟಿ ಇದೀನಾ ಇಲ್ಲವಾ? ಎಂಬುದನ್ನು ಜನರು ಚುನಾವಣೆಯಲ್ಲಿಯೇ ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳ ಜತೆ ಅವರು ಮಾತನಾಡಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಖಾರವಾಗಿ ತಿರುಗೇಟು ಕೊಟ್ಟ ಅವರು,
” ಹೊಸ ತೊಡಕು ದಿನ ನಮ್ಮ ತೋಟದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗೆ ಅಷ್ಟು ಜ್ಞಾನ ಇಲ್ಲವೇ? ಆದರೆ ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ ” ಎಂದರು. ನಾನು ಜಾತಿ ಆಧಾರದಲ್ಲಿ ರಾಜಕಾರಣ ಮಾಡಿದವನಲ್ಲ. ಪಾಪ ನನ್ನ ಸ್ನೇಹಿತರಿಗೆ ಹಣದ ಮದ ನೆತ್ತಿಗೇರಿದೆ.
ಪತ್ನಿ ತನ್ನ ಮಾಜಿ ಪತಿಗೆ ಪ್ರತಿ ತಿಂಗಳು 10 ಸಾವಿರ ರೂ. ಜೀವನಾಂಶ ನೀಡಬೇಕು: ಹೈಕೋರ್ಟ್ ಆದೇಶ
ಕುಮಾರಸ್ವಾಮಿ ನನಗೆ ಡೋಂಟ್ ಕೇರ್ ಅಂದಿದ್ದಾರೆ, ನಾನೇನು ಲೆಕ್ಕಕ್ಕೆ ಇಟ್ಟಿಕೋ ಎಂದು ಹೇಳಿದ್ದೀನಾ? ರಾಜ್ಯದ ಜನ ತೀರ್ಮಾನ ಮಾಡುತ್ತಾರೆ. ಇವರ ಹಣ ಅಧಿಕಾರ ಯಾವುದನ್ನೂ ತೀರ್ಮಾನ ಮಾಡಲ್ಲ. ಆರೂವರೆ ಕೋಟಿ ಜನ ಕುಮಾರಸ್ವಾಮಿ ಅವಶ್ಯಕತೆ ಇದೆಯೊ ಇಲ್ಲವೊ ಎಂದು ತೀರ್ಮಾನ ಮಾಡುತ್ತಾರೆ. ಅವರು ಏನೋ ಐ ಆಮ್ ಸ್ಟ್ರೈಟ್ ಫೈಟರ್ ಎಂದು ಹೇಳಿದಾರೆ. ಹೌದು ಕಣಪ್ಪ ನನಗೂ ಗೊತ್ತು, ನೀನು ಸ್ಟ್ರೈಟ್ ಪೈಟರ್ ಅಂತ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಅವರು ಗುಡುಗಿದರು.