ಬೆಂಗಳೂರು:- ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ – ಹೆಚ್ ಡಿ ರೇವಣ್ಣ ಫಸ್ಟ್ ರಿಯಾಕ್ಷನ್..!
ಪ್ರಜ್ವಲ್ ರೇವಣ್ಣ ಅವರ ಖಾಸಗಿ ವೀಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಘಾತಕ್ಕೆ ಒಳಗಾಗಿರುವ ದೇವೇಗೌಡರ ಆರೋಗ್ಯ ವಿಚಾರಿಸಿ ಮಾತನಾಡಿದರು. ನನಗೆ ನಾಲ್ಕು ದಿನಗಳಿಂದ ವೈರಲ್ ಫಿವರ್ ಆಗಿತ್ತು. ಹಾಗಾಗಿ ಫೋನ್ನಲ್ಲಿ ಮಾತನಾಡಿದ್ದೆ, ಈಗ ಬಂದು ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣ ವಿಚಾರವಾಗಿ ಕರ್ನಾಟಕ ಸರ್ಕಾರ ಈಗಾಗಲೇ ಎಸ್ ಐಟಿ ರಚನೆ ಮಾಡಿದೆ. ತನಿಖೆ ನಡೆಯುತ್ತಿದೆ ಇದೆ ಕಾನೂನಿಗಿಂತ ಯಾರು ದೊಡ್ಡವರಲ್ಲ, ಅದು ಒಂದು ಪ್ರಕ್ರಿಯೆ ಅದರ ಬಗ್ಗೆ ನಾನು ಮಾತನಾಡೋಕ್ಕೆ ಹೋಗಲ್ಲ ಎಂದರು.
ನನಗೆ ಒಂದೇ ಒಂದು ದುಃಖ ಏನು ಎಂದರೆ, ಆ ವಿಶ್ಯುವಲ್ ಏನಿದೆ ಅದನ್ನ ನಾನು ನೋಡಕ್ಕೆ ಹೋಗಿಲ್ಲ. ನನ್ನ ಆಪ್ತ ವರ್ಗದವರು ಹೇಳಿದ ಪ್ರಕಾರ, ಕನಿಷ್ಠ ಆ ವೀಡಿಯೋ ಬ್ರರ್ ಕೂಡ ಆಗಿಲ್ಲ. ಆದರೆ ಪಾಪ ಆ ಹೆಣ್ಣು ಮಕ್ಕಳ ಮುಖವನ್ನು ಓಪನ್ ಆಗಿ ತೋರಿಸ್ತಾರೆ. ಇದು ನಿಜಕ್ಕೂ ಕೂಡ ಬೇಜಾರ್ ಆಗುತ್ತೆ, ಇದರ ಬಗ್ಗೆಯೂ ಸಹ ತನಿಖೆ ಆಗಬೇಕು. ಪ್ರಕರಣ ಮುಂದಿಟ್ಟುಕೊಂಡು ದೇವೇಗೌಡ ಅವರನ್ನ ಹಾಗೂ ಕುಮಾರಸ್ವಾಮಿ ಅವರನ್ನ ತರೋದು ಸರಿಯಲ್ಲ. ಯಾರೂ ಆರೋಪಿ ಇದ್ದಾರೆ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಖಂಡಿತಾ ಶಿಕ್ಷೆ ಆಗಬೇಕು ಎಂದರು.
ಪ್ರಕರಣದಲ್ಲಿ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕೆಂಬುವುದು ಕೂಡ ಒಳ್ಳೆದಲ್ಲ, ಅದು ಸೂಕ್ತನೂ ಅಲ್ಲ. ಅಲ್ಲದೇ ಹಾಸನ ವಿಚಾರ ಆಗಲಿ, ನನಗೆ ಅದಕ್ಕೂ ಸಂಬಂಧ ಇಲ್ಲ. ನಾನು ಹೆಚ್ಚಿಗೆ ಹಾಸನಕ್ಕೆ ಕಾಲೇ ಇಟ್ಟಿಲ್ಲ, ಹೋದರೆ ಹಾಸನಾಂಬೆ ಉತ್ಸವಕ್ಕೆ ಮಾತ್ರ ಹೋಗ್ತೇನೆ. ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ. ಹಾಸನ ಟಿಕೆಟ್ ಕೊಡೋ ವಿಚಾರದಲ್ಲಿ ಪಕ್ಷದ ಕಾರ್ಯಕರ್ತರು ರಾಷ್ಟ್ರೀಯ ಅಧ್ಯಕ್ಷರು ಅಂತಿಮ ನಿರ್ಧಾರ, ಅವರ ನಿರ್ಧಾರಕ್ಕೆ ತಲೆಬಾಗಿ ಕೆಲಸ ಮಾಡಿದ್ದೇವೆ. ಪ್ರಕರಣದಿಂದ ಪಕ್ಷದ ಕಾರ್ಯಕರ್ತರರಿಗೆ ಧೈರ್ಯ ಹೇಳಲು ಹಾಸನಕ್ಕೆ ಕುಮಾರಣ್ಣ ಹೋಗ್ತಾರೆ. ಪಕ್ಷದ ನಾಯಕರು, ಕಾರ್ಯಕರ್ತರು ಧೈರ್ಯಗುಂದುವಿಕೆ ಬೇಡ ಎಂದು ಕರೆ ನೀಡಿದರು