ಶಿವಮೊಗ್ಗ:- ನನಗೆ ಸ್ಪಷ್ಟವಾಗಿ ಕನ್ನಡ ಓದಲು ಬರಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ದುಡ್ಡು ಬೇಕಾದ್ರೆ ಕೊಡ್ತೀವಿ ಪ್ಲೀಸ್ ನೀವು ಇದನ್ನು ಮಾಡಿ.. RCB ಮ್ಯಾನೇಜ್ಮೆಂಟ್ ಗೆ ಫ್ಯಾನ್ಸ್ ಹೀಗೊಂದು ಬೇಡಿಕೆ!
ಈ ಸಂಬಂಧ ಮಾತನಾಡಿದ ಅವರು,ನಾನು ಓದುವುದರಲ್ಲಿ ಅಷ್ಟು ಬುದ್ದಿವಂತನಾಗಿರಲಿಲ್ಲ. ನಾನು ಸಹ ಫೇಲ್ ಆಗಿದ್ದೇನೆ. ನನಗೆ ಕನ್ನಡ ಅಷ್ಟು ಶುದ್ಧವಾಗಿ ಓದಲು ಬರಲ್ಲ. ಸ್ವಲ್ಪ ಉಚ್ಚಾರಣೆ ತಪ್ಪಾಗುತ್ತೆ. ನನ್ನ ಬಗ್ಗೆ ಕೆಟ್ಟ ಟ್ರೋಲ್ ಮಾಡುವವರು ಎಂದೂ ಉದ್ಧಾರಾಗಲ್ಲ ಎಂದು ಶಾಪ ಹಾಕಿದರು.
ಬಾಗಲಕೋಟೆ ಜಿಲ್ಲೆಯ ಮಳ್ಳಿಗೇರಿ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕ ಪಡೆಯುವ ಮುಖಾಂತರ ಸಾಧನೆ ಮಾಡಿದ್ದಾರೆ. ನಮ್ಮ ಇಲಾಖೆವತಿಯಿಂದ ವಿದ್ಯಾರ್ಥಿನಿ ಮತ್ತು ಆಕೆಯ ಪೋಷಕರಿಗೆ ಧನ್ಯವಾದ ತಿಳಿಸುತ್ತೇನೆ. ಇಲಾಖೆಯಲ್ಲಿ ಅನೇಕ ಬದಲಾವಣೆ ಮಾಡಿದ್ದೇವೆ. ಪಠ್ಯ ಪುಸ್ತಕ ಬದಲಾವಣೆ, ಶಿಕ್ಷಕರ ನೇಮಕ ಹೀಗೆ ಅನೇಕ ಬದಲಾವಣೆ ತಂದಿದ್ದೇವೆ. ಅನುದಾನಿತ ಶಾಲೆಗಳಿಗೂ ಶಿಕ್ಷಕರ ನೇಮಕ ಮಾಡುತ್ತೇವೆ ಎಂದು ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)