ಬೆಂಗಳೂರು: ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ನಾಯಕತ್ವ ಬಯಸಿಲ್ಲ ಹಾಗೂ ಅದರ ಅಗತ್ಯವೂ ನನಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೇವೇಗೌಡರ ಕುಟುಂಬ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಒಕ್ಕಲಿಗ ನಾಯಕತ್ವದ ಪೈಪೋಟಿಯ ಭಾಗವಾಗಿ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಹೊರಬರುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರು ಈ ಸಮಜಾಯಿಷಿ ನೀಡಿದ್ದಾರೆ.
ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಒಕ್ಕಲಿಗರ ನಾಯಕತ್ವಕ್ಕಾಗಿ ಇಂತಹ ಪ್ರಕರಣಗಳನ್ನು ಹೊರತರಲಾಗುತ್ತಿದೆ ಎನ್ನುವುದೆಲ್ಲವೂ ಬಿಜೆಪಿ ಸೃಷ್ಟಿ. ನನಗೆ ಯಾವುದೇ ನಾಯಕತ್ವ ಬೇಡ. ಕಾಂಗ್ರೆಸ್ ಪಕ್ಷ ನಾಲ್ಕು ವರ್ಷಗಳ ಹಿಂದೆಯೇ ನನ್ನನ್ನು ಪಕ್ಷದ ಅಧ್ಯಕ್ಷನಾಗಿ ಮಾಡಿದೆ,” ಎಂದರು.
”ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ನನ್ನ ಮೇಲಿದೆ. ಜತೆಗೆ, ಸಮುದಾಯದ ಜನರ ಸ್ವಾಭಿಮಾನ, ಗೌರವ ಉಳಿಸುವ ಕೆಲಸ ಮಾಡುತ್ತೇನೆ. ಅದು ನನ್ನ ಧರ್ಮವೂ ಹೌದು. ಉಳಿದಂತೆ ನನಗೆ ಯಾವ ನಾಯಕತ್ವದ ಪಟ್ಟವೂ ಬೇಡ,” ಎಂದು ಹೇಳಿದರು.