ಬೆಂಗಳೂರು: ಅಧ್ಯಕ್ಷ ಸ್ಥಾನ ಅನ್ನೋದು ನ್ಯಾಯಪೀಠವಿದ್ದಂತೆ. ನ್ಯಾಯಾಧೀಶ ಬದಲಾಗಬಹುದು. ನ್ಯಾಯಪೀಠವಲ್ಲ. ಆ ಪೀಠಕ್ಕೆ ಯಾವ ಬೆಲೆ ಕೊಡಬೇಕೋ ಆ ಬೆಲೆಯನ್ನು ನಾನು ಕೊಡುತ್ತೇನೆ ಎಂದು ಮಾಜಿ ಸಚಿವ ಸಿ.ಟಿ ರವಿ (CT Ravi) ಹೇಳಿದ್ದಾರೆ.
ಮಹಿಳೆಯರಿಗೆ ಗುಡ್ ನ್ಯೂಸ್: ಶಕ್ತಿ ಯೋಜನೆಯ ಪ್ರಯಾಣಕ್ಕೆ ಹೊಸ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ!
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು (Narendra Modi) ಮತ್ತೊಮ್ಮೆ ಪ್ರಧಾನಿಯಾಗಬೇಕು ಅನ್ನೋದು ನಮ್ಮ ಗುರಿ. ದೇಶದಲ್ಲಿ ಮತ್ತೊಮ್ಮೆ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಆ ಗುರಿಯನ್ನು ಈಡೇರಿಸಲು ಎಲ್ಲ ರೀತಿಯ ಕೆಲಸ ಮಾಡಿ, ಸಹಕಾರ ನೀಡುತ್ತೇವೆ. ನಾವು ಇದುವರೆಗೂ ಪಕ್ಷದ ಲಕ್ಷ್ಮಣ ರೇಖೆ ದಾಟಿಲ್ಲ.
20 ವರ್ಷಗಳ ಕಾಲ ಶಾಸಕರಾಗಿ, 35 ವರ್ಷಗಳಿಂದ ಪಕ್ಷದ ಕಾರ್ಯಕರ್ತನಾಗಿ ಪಕ್ಷದ ಜವಾಬ್ದಾರಿ ನಿಭಾಯಿಸಿದ್ದೇನೆ. ನಾನು ಎಂದೂ ಪಕ್ಷದ ಲಕ್ಷ್ಮಣ ರೇಖೆ ದಾಟಿಲ್ಲ. ಒಂದು ವೇಳೆ ಜಗಳ ಮಾಡಿದ್ದರೂ ನಮ್ಮ ಮನೆಯ ಒಳಗೇ ಜಗಳ ಆಡಿದ್ದೇವೆ. ಪಕ್ಕದ ಮನೆಯಲ್ಲಿ ಕೂತು ನಮ್ಮ ಮನೆಯ ಸಮಸ್ಯೆಯನ್ನ ಬಗೆಹರಿಸಿ ಎಂದು ಕೇಳಿಲ್ಲ ಎಂದು ಹೇಳಿದ್ದಾರೆ.