ರಾಯಚೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಳ್ಳುತ್ತಿದ್ದಂತೆ ಎಚ್ಚೆತ್ತ ರಾಯಚೂರು ಗ್ರಾಮೀಣ ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ತಮ್ಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಸಾರ್ವಜನಿಕರ ಗಮನಕ್ಕೆ ತರಲು ಈ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿರೋಧ ಪಕ್ಷಗಳು ನನ್ನ ಮೇಲೆ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಹಗರಣ ನಡೆದ ಅವಧಿ ಹಾಗೂ ನಾನು ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ನಂತರ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. 187 ಕೋಟಿ ಹಗರಣದ ತನಿಖೆಯಲ್ಲಿ ಎಸ್ಐಟಿ ಐವರನ್ನ ಬಂಧಿಸಿದೆ. ಸಿಬಿಐ ತನಿಖೆಯು ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ನಿಗಮದ ಹಣ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾಗಿದ್ದು, ಸಮುದಾಯದ ಅಭಿವೃದ್ಧಿಗೆ ಬಳಸಬೇಕು. ನಿಗಮದ ಹಣ ಯಾರೇ ಕಬಳಿಸಲು ಯತ್ನಿಸಿದ್ದರೂ ತನಿಖೆಯಲ್ಲಿ ಹೊರಬರುತ್ತದೆ. ಸರ್ಕಾರ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ವಿರೋಧ ಪಕ್ಷಗಳು ನನ್ನ ವಿರುದ್ದ ಮಾಡುವ ಆರೋಪಗಳಿಗೆ ಸಾಕ್ಷಿಗಳಿದ್ದರೆ ತನಿಖಾ ಸಂಸ್ಥೆಗಳಿಗೆ ಕೊಡಲಿ. ಸಾಕ್ಷಿ ಕೊಟ್ಟರೆ ತನಿಖೆಗೆ ಅನುಕೂಲವಾಗುತ್ತದೆ. ಸತ್ಯಾಂಶ ಹೊರಬರುತ್ತದೆ. ವಿರೋಧ ಪಕ್ಷಗಳು ವೃತಾ ಆರೋಪ ಮಾಡುವುದನ್ನ ಬಿಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)