ಚಿಕ್ಕಬಳ್ಳಾಪುರ: ನಾನು ಚುನಾವಣೆ ನಂತರ ಹರಕೆ ಕಟ್ಟಿಕೊಂಡಿದ್ದೆ, ಹಾಗಾಗಿ ಗಡ್ಡ (Beard) ಬಿಟ್ಟಿದ್ದೆ. ಈಗ ದೇವಾಲಯಕ್ಕೆ ಹೋಗಿ ಬಂದ ಮೇಲೆ ಗಡ್ಡ ತೆಗೆದಿದ್ದೇನೆ ಎಂದು ಚಿಕ್ಕಬಳ್ಳಾಪುರ (Chikkaballapura) ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ (K Sudhakar) ಸ್ಪಷ್ಟನೆ ನೀಡಿದ್ದಾರೆ. ಡಾ.ಕೆ.ಸುಧಾಕರ್ ಟೆಂಪಲ್ ರನ್ ಮುಂದುವರಿಸಿದ್ದು, ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬೆಳ್ಳಂಬೆಳಗ್ಗೆ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ನಂತರ ದೊಡ್ಡಬಳ್ಳಾಪುರ ನಗರದ ನೆಲದಾಂಜನೇಯಸ್ವಾಮಿ ದೇವಾಲಯಕ್ಕೂ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮುನ್ನವೂ ಕಾಂಗ್ರೆಸ್ ಬಿಟ್ಟು ಬಿಜೆಪಿ ಬಂದಾಗ ಗಡ್ಡ ಬಿಟ್ಟಿದ್ದ ಸುಧಾಕರ್ ಉಪಚುನಾವಣೆ ಗೆಲವಿನ ನಂತರ ಗಡ್ಡ ತೆಗೆದಿದ್ದರು.
ಆದಾಯ ತೆರಿಗೆದಾರರ ಗಮನಿಸಿ.. ಮಾ.31 ರೊಳಗೆ ಈ ಕೆಲಸ ಕಡ್ಡಾಯ.! ಇಲ್ಲಾಂದ್ರೆ ದಂಡ ಗ್ಯಾರಂಟಿ
ಈ ಬಾರಿ ವಿಧಾನಸಭೆ ಚುನಾವಣೆ ಸೋಲಿನ ನಂತರ ಗಡ್ಡ ಬಿಟ್ಟಿದ್ದ ಸುಧಾಕರ್, ಈಗ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಕ್ಲೀನ್ ಶೇವ್ ಮಾಡಿಕೊಂಡು ಸ್ಮಾರ್ಟ್ ಆಗಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ಸುಧಾಕರ್, ಸೋಲಿನ ನಂತರ ಹರಕೆ ಹೊತ್ತುಕೊಂಡಿದ್ದೆ, ಈಗ ದೇವರ ದರ್ಶನ ಪಡೆದು ಗಡ್ಡ ತೆಗೆದಿದ್ದೇನೆ ಎಂದು ತಿಳಿಸಿದ್ದಾರೆ.