ಬೆಂಗಳೂರು: ಗಂಡನಿಂದ ಹೆಂಡತಿ ಹಾಗೂ ಮಾವನಿಗೆ ಖಾರದ ಪುಡಿ ಎರಚಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ನೆಲಗೆದರನಹಳ್ಳಿಯಲ್ಲಿ ನಡೆದಿದೆ. ಮದ್ವೆ ಆದಾಗ ಸುಂದರವಾಗಿದ್ದೆ, ಈಗ ದಪ್ಪ ಆಗಿದ್ಯಾ ಎಂದು ಹೆಂಡತಿಯ ಸೌಂದರ್ಯದ ವಿಚಾರಕ್ಕೆ ಪದೇ ಪದೇ ಕಿರಿಕ್ ತೆಗೆದು ಗಲಾಟೆ ಮಾಡುತ್ತಿದ್ದನು.
Gold Loans: ಕಡಿಮೆ ಬಡ್ಡಿ ದರದಲ್ಲಿ ಚಿನ್ನದ ಸಾಲ: ಟಾಪ್ 5 ಬ್ಯಾಂಕ್ʼಗಳು ಯಾವುವು ಗೊತ್ತಾ..?
ಅಲ್ಲದೇ ವರದಕ್ಷಿಣೆ ವಿಚಾರಕ್ಕೂ ಪದೇ ಪದೇ ಗಲಾಟೆ ಮಾಡಿ ತನ್ನ ಪತ್ನಿ, ಮಾವ, ಮಗನಿಗೆ ಖಾರದಪುಡಿ ಎರಚಿ ಹಲ್ಲೆ ಮಾಡಿದ್ದಾನೆ. ಪುಲಿ ಸಾಯಿಕುಮಾರ್ ಎಂಬಾತನಿಂದ ಪತ್ನಿ ರಮ್ಯ ಹಾಗೂ ಮಾವನ ಮೇಲೆ ಹಲ್ಲೆ ಮಾಡಲಾಗಿದೆ.
ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಮಹಿಳೆಗೆ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಪುಲಿ ಸಾಯಿಕುಮಾರ್ 2021ರಲ್ಲಿ ಮ್ಯಾಟ್ರಿಮೋನಿಯಲ್ಲಿ ಪರಿಚಯನಾಗಿದ್ದ.
ಬಳಿಕ ಇಬ್ಬರಿಗೂ ಮದುವೆಯಾಗಿತ್ತು. ಆಗಿನಿಂದಲೂ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾಳೆ. ಈ ಹಿಂದೆಯೂ ಪುಲಿ ಸಾಯಿಕುಮಾರ್ ವಿರುದ್ಧ ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಮತ್ತೆ ಗಲಾಟೆ ಮಾಡಿ ಹಲ್ಲೆ ಮಾಡಿದ್ದು, ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.