ರಾಂಚಿ: ಅಯೋಧ್ಯೆಗೆ ಭೇಟಿ ಕೊಟ್ಟು ರಾಮಲಲ್ಲಾನ ದರ್ಶನ ಪಡೆದ ಬಳಿಕ ಪಕ್ಷದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ಮಾಜಿ ವಕ್ತಾರೆ ರಾಧಿಕಾ ಖೇರಾ ಗಂಭೀರ ಆರೋಪ ಮಾಡಿದ್ದಾರೆ. ಶನಿವಾರವಷ್ಟೇ ಕಾಂಗ್ರೆಸ್ ತೊರೆದಿರುವ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನಾನು ಅಯೋಧ್ಯೆಗೆ ಹೋಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಾಗಲಿಲ್ಲ. ಆದರೆ ಅಲ್ಲಿಗೆ ಭೇಟಿ ನೀಡಿದ್ದಕ್ಕಾಗಿ ಇಷ್ಟೊಂದು ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ನಾನು ನನ್ನ ಜೀವನದಲ್ಲಿ ಎಂದಿಗೂ ಯೋಚಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಬಿಸಿಲ ಉರಿಗೆ ಬೆಂದ ಜನರು.! ಬಿಸಿಲ ಬೇಗೆಯಿಂದ ಪಾರಾಗಲು ಹೀಗೆ ಮಾಡಿ ಸಾಕು..
ಛತ್ತೀಸ್ಗಢ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ. ಅಯೋಧ್ಯೆಗೆ ಭೇಟಿ ಕೊಟ್ಟ ಬಳಿಕ ನನಗೆ ನಿರಂತರವಾಗಿ ಕಿರುಕುಳ ನೀಡಲಾಗುತ್ತಿದೆ. ಕಾಂಗ್ರೆಸ್ ನನ್ನನ್ನು ಮಹಿಳಾ ವಿರೋಧಿ ಎಂದು ಆರೋಪಿಸಿದೆ. ಈ ಬಗ್ಗೆ ನಾನು ಧ್ವನಿಯೆತ್ತಿದರೂ ನನಗೆ ನ್ಯಾಯ ಸಿಗಲಿಲ್ಲ. ಇಂದು ನಾನು ನನ್ನ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ರಾಧಿಕಾ ತಿಳಿಸಿದ್ದಾರೆ.