ರಾಮನಗರ: ”ನಾನು ಕಾಂಗ್ರೆಸ್ ಪರ ಮಾತನಾಡಿಲ್ಲ. ನಾನು ಬಿಜೆಪಿ ನಾಯಕರ ಜತೆಯಲ್ಲಿದ್ದೇನೆ. ಆದರೆ, ರಾಷ್ಟ್ರೀಯ ನಾಯಕರು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಹೀಗಾಗಿ, ನಾನು ಅಸಮಾಧಾನ ಸ್ಫೋಟ ಮಾಡಬೇಕಾಯಿತು,” ಎಂದು ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕ್ಷೇತ್ರದ ಅಭಿವೃದ್ಧಿಗಾಗಿ ಸಿಎಂ, ಡಿಸಿಎಂ ಭೇಟಿ ಮಾಡುತ್ತೇನೆ. ಆದರೆ, ಕೆಲವು ನಾಯಕರು ‘ಹೋಗಲಿ ಬಿಡ್ರಿ ಅವ್ನು’ ಅಂತ ಏಕವಚನದಲ್ಲಿ ಮಾತನಾಡಿದ್ದಾರೆ.
ಏಕವಚನದಲ್ಲಿ ಮಾತನಾಡಿಸಿಕೊಳ್ಳುವ ರೀತಿಯಲಿ ನಾನು ಬೆಳೆದಿಲ್ಲ. ಈ ಕ್ಷೇತ್ರದಲ್ಲಿ6 ಬಾರಿ ಸ್ಪರ್ಧೆ ಮಾಡಿದ್ದೇನೆ. ಮತದಾರರು ನಾಲ್ಕು ಬಾರಿ ಗೆಲ್ಲಿಸಿ, 2 ಬಾರಿ ಸೋಲಿಸಿದ್ದಾರೆ. ಇವನ್ಯಾರೋ ಲೀಡರ್ ಬಂದು ಏಕವಚನದಲ್ಲಿ ಹೋಗಿ ಅಂದ್ರೆ ಆಗಲ್ಲ. ಅವರಪ್ಪನ ರೀತಿ ಮಾತನಾಡುವ ಶಕ್ತಿಯನ್ನು ದೇವರು ನನಗೂ ಕೊಟ್ಟಿದ್ದಾನೆ,” ಎಂದು ವಾಗ್ದಾಳಿ ನಡೆಸಿದರು. ‘ಕ್ಷೇತ್ರದ ಜನತೆ ಪ್ರಾಮಾಣಿಕವಾಗಿ ಕೆಲಸ ಮಾಡಲು ಗೆಲ್ಲಿಸಿದ್ದಾರೆ. ಇದನ್ನು ಬಿಟ್ಟು ಯಾವನ್ನೋ ಟಾರ್ಗೆಟ್ ಮಾಡಿ ಮಾತನಾಡು ಅಂತ ಗೆಲ್ಲಿಸಿಲ್ಲ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
20 ವರ್ಷ ಕಾಂಗ್ರೆಸ್ನಲ್ಲಿದ್ದು, ಬಿಜೆಪಿಗೆ ಬಂದೆ. ಒಂದು ಸಣ್ಣ ತಪ್ಪನ್ನೂ ಬಿಜೆಪಿ ಸರಕಾರದಲ್ಲಿ ಮಾಡಿಲ್ಲ. ಆದರೆ, ಶೇ.50ರಷ್ಟು ಬಿಜೆಪಿ ಮೂಲದವರು ನನ್ನ ವಿರುದ್ಧ ಕೆಲಸ ಮಾಡಿದರು. ಆದರೂ ನಾನು ಅಸಮಾಧಾನ ತೋರಿಸಲಿಲ್ಲ. ರಮೇಶ್ ಜಾರಕಿಹೊಳಿ ಬಿಟ್ಟು ನನ್ನೊಂದಿಗೆ ಬಿಜೆಪಿ ಸೇರಿದ್ದ ಅನೇಕರಿಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ,” ಎಂದು ಅಸಮಾಧಾನ ಹೊರಹಾಕಿದರು.