ಮಂಡ್ಯ: 2028ರ ವರೆಗೆ ಈ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಸಿಎಂ ಆಗ್ತೀನಿ. ಜನರು ಒಂದು ಅವಕಾಶ ಕೊಡ್ತಾರೆ ಅನ್ನೋ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಆಗಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಭವಿಷ್ಯ ನುಡಿದರು.
ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್: ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ!
ನಗರದಲ್ಲಿ ʻಮಂಡ್ಯ ಟು ಇಂಡಿಯಾʼ (Mandya To India) ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದ ಅವರು, 2028ರ ವರೆಗೆ ಈ ಸರ್ಕಾರ ನಡೆಯಲ್ಲ. ಅಷ್ಟರೊಳಗೆ ನನಗೆ ಅವಕಾಶ ಬರುತ್ತೆ, ಮತ್ತೆ ನಾನೇ ಸಿಎಂ ಆಗ್ತೀನಿ ಎಂದು ಹೇಳಿದರು
ನಾನು ಜ್ಯೋತಿಷಿ ಅಲ್ಲ ಆದ್ರೂ ಹೇಳ್ತಿದ್ದಿನಿ. ಮತ್ತೆ ಸಿಎಂ ಆಗುವ ವಿಚಾರ ಜನ ತೀರ್ಮಾನ ಮಾಡ್ತಾರೆ ಅನ್ನೋ ವಿಶ್ವಾಸದಲ್ಲಿದ್ದೇನೆ. ಜನ ಬಯಸಿದರೆ ಯಾಕೆ ಆಗಬಾರದು? 5 ವರ್ಷ ಸರ್ಕಾರ ನಡೆಸಲು ನನಗೆ ಅವಕಾಶ ಮಾಡಿಕೊಡಿ ಅಂತ ಜನರಿಗೆ ಈಗಲೂ ಮನವಿ ಮಾಡ್ತೀನಿ. ಹಿಂದಿನ ಅವಧಿಯಲ್ಲಿ ನನ್ನ 14 ತಿಂಗಳ ಆಡಳಿತ, ಬೇರೆಯವರ ಹಂಗಿನಲ್ಲಿ ಮಾಡಿದ್ದು. ಈಗಿನ ಸಂಪೂರ್ಣ ಬಹುಮತದ ಸರ್ಕಾರ ಯಾವ ರೀತಿ ಆಡಳಿತ ನಡೆಸುತ್ತಿದ್ದಾರೆ. ಇನ್ನೊಬ್ಬರ ಹಂಗಿನಲ್ಲಿ ಸರ್ಕಾರ ಮಾಡಿದಾಗಲೂ ನಾಡಿಗೆ ಕೊಟ್ಟ ಕಾರ್ಯಕ್ರಮ ಜನರ ಮನಸ್ಸಿನಲ್ಲಿ ಉಳಿದಿದೆ. 5 ವರ್ಷಗಳ ಸರ್ಕಾರ ನನಗೆ ಒಂದು ಬಾರಿ ಸಿಕ್ಕಿದ್ರೆ, ನನಗೆ ಆಗಿರುವ ಅನುಭವದಲ್ಲಿ ಉತ್ತಮ ಕೆಲಸ ಮಾಡ್ತೇನೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಕರ್ನಾಟಕ ಸಮೃದ್ಧಿಯ ನಾಡು, ಇನ್ನೊಬ್ಬರಿಗೆ ಕೈ ಎತ್ತಿ ಕೊಡುವ ಆರ್ಥಿಕ ಶಕ್ತಿ ಕೊಡುವ ರಾಜ್ಯ ಇದು. ಆದ್ರೆ ಇವತ್ತು ಹಣ ಲೂಟಿಯಾಗುತ್ತಿದೆ. ಸರ್ಕಾರದ ಆಸ್ತಿ ಕಬಳಿಕೆ ಆಗ್ತಿದೆ. ಇದಕ್ಕೆ ಕಡಿವಾಣ ಹಾಕಿದ್ರೆ. ಇವರು ಕೊಡುವ 2,000 ರೂ. ಅಲ್ಲ ಕನಿಷ್ಠ 10 ಸಾವಿರ ರೂ. ಸಂಪಾದನೆ ಮಾಡುವ ಕಾರ್ಯಕ್ರಮಗಳು ಇವೆ. ಜನರು ಒಂದು ಅವಕಾಶ ನೀಡ್ತಾರೆ ಅನ್ನೋ ವಿಶ್ವಾಸ ಇದೆ. 2028ರ ಒಳಗೆ ಆ ಅವಕಾಶ ನನಗೆ ಬರುತ್ತೆ ಎಂದು ತಿಳಿಸಿದರು.