ಚಿಕ್ಕಬಳ್ಳಾಪುರ: ಕ್ಷೇತ್ರದ ಅಭಿವೃದ್ಧಿಗೆ ನಾನು ಅನುದಾನ ತಂದಿದ್ದೇನೆ. ಪ್ರ್ಯಾಕ್ಟೀಸ್ ಮ್ಯಾಚ್ ಆಡುವುದಲ್ಲ. ರಿಯಲ್ ಮ್ಯಾಚ್ನಲ್ಲಿ ಭಾಗವಹಿಸಿ ಗೆಲ್ಲಬೇಕು ಎಂದು ಸಂಸದ ಡಾ. ಕೆ. ಸುಧಾಕರ್ಗೆ ಶಾಸಕ ಪ್ರದೀಪ್ ಈಶ್ವರ್ ಅವರು ಟಾಂಗ್ ನೀಡಿದರು. ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಾದ ಅನುದಾನ ತರಲು ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು, ಯುಜಿಡಿಗೆ 30 ಕೋಟಿ ಮತ್ತು 25 ಕೋಟಿ ರೂ. ವಿಶೇಷ ಅನುದಾನ ತಂದಿದ್ದೇನೆ ಎಂದು ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ” ನಗರದಲ್ಲಿರುವ ಒಳಚರಂಡಿ ಸಮಸ್ಯೆ ನಿವಾರಣೆಗೆ ನಗರಾಭಿವೃದ್ಧಿ ಸಚಿವರ ಜತೆ ಮಾತನಾಡಿ 30 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ್ದೇನೆ. ಇನ್ನೊಂದೆರೆಡು ವರ್ಷದಲ್ಲಿನಗರದಲ್ಲಿರುವ ಒಳಚರಂಡಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುತ್ತೇನೆ ” ಎಂದು ಹೇಳಿದರು. ನಾನು ಇದುವರೆಗೂ ಕ್ಷೇತ್ರದ ಅಭಿವೃದ್ಧಿಗೆ ಎಷ್ಟು ಅನುದಾನ ತಂದಿದ್ದೇನೆ ಎಂಬುದರ ಮಾಹಿತಿಯನ್ನು ಬೇಕಾದರೆ ಸಂಸದರಿಗೆ ನೀಡುತ್ತೇನೆ.
Ola Drops Google Maps: ಇನ್ನುಂದೆ ಓಲಾ ಕ್ಯಾಬ್ಸ್ʼನಲ್ಲಿ ಗೂಗಲ್ ಮ್ಯಾಪ್ಸ್ ಇರುವುದಿಲ್ಲ..! ಯಾಕೆ ಗೊತ್ತಾ..?
ಅವರು ನೋಡಿಕೊಳ್ಳಲಿ. ಜನಸ್ಪಂದನ ಕಾರ್ಯಕ್ರಮದಲ್ಲಿ250ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಅವುಗಳನ್ನು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ರವಾನಿಸಲಾಗಿದ್ದು, ಸ್ಥಳದಲ್ಲೇ ಪರಿಹಾರ ನೀಡಬಹುದಾದ ಅಹವಾಲುಗಳನ್ನು ಪರಿಹರಿಸಲಾಗಿದೆ. ದರಕಾಸ್ತು ಜಮೀನಿಗೆ ಸಂಬಂಧಿಸಿದಂತೆ ಇನ್ನು 2 ತಿಂಗಳಲ್ಲಿ ಸಭೆ ಮಾಡಿ ಅರ್ಹರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ ” ಎಂದು ತಿಳಿಸಿದರು.