ಹಾಸನ: ಬಿಜೆಪಿ ಮುಖಂಡ ದೇವರಾಜೇಗೌಡ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹೇಳಿದರು. ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ದೇವರಾಜೇಗೌಡ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಸುಳ್ಳಿನ ಸುರಿಮಳೆಯನ್ನು ನಮ್ಮ ನಾಯಕರು, ನಮ್ಮ ಮೇಲೆ ಮಾಡಿದ್ದಾರೆ. ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ” ಎಂದರು.
”ಸ್ಕೈಬರ್ಡ್ ಹೋಟೆಲ್ನಲ್ಲಿ ಸಿಸಿಟಿವಿ ವಿಡಿಯೋ ಇದೆ, ಪರಿಶೀಲನೆ ನಡೆಸಲಿ. ಹಾಸನ, ಹೊಳೆನರಸೀಪುರದಲ್ಲಿ ಬಹಿರಂಗವಾಗಿ ಚರ್ಚೆಗೆ ಬರಲಿ. ನನ್ನ ಪಾತ್ರ ಇದೆ ಎಂದು ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಜೂ.4ರಂದು ಜನರ ಆಶೀರ್ವಾದದಿಂದ ಗೆದ್ದರೆ ಅಂದೇ ರಾಜೀನಾಮೆ ಕೊಡುತ್ತೇನೆ” ಎಂದು ಸವಾಲು ಹಾಕಿದರು.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
”ಈ ಪ್ರಕರಣದ ತನಿಖೆ ಸರಿಯಾಗಿ ನಡೆಯಬೇಕು. ದೇವರಾಜೇಗೌಡರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಈಗಾಗಲೇ ವಕೀಲರ ಜೊತೆಗೆ ಮಾತನಾಡಿದ್ದೇನೆ. ನನಗೆ ಕಳಂಕ ಬರುವ ಕೆಲಸ ಮಾಡುತ್ತಿರುವ ದೇವರಾಜೇಗೌಡ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ. ಇವರು ಎಸ್ಐಟಿ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಎನ್.ಆರ್.ವೃತ್ತದಲ್ಲಿ ಎಲ್ಇಡಿ ಹಾಕಿಸಿ ವಿಡಿಯೋ ತೋರಿಸುತ್ತೇನೆ ಅಂತ ಹೇಳಿದವರು ನಾನಾ, ಅವರಾ, ಯಾರು?” ಎಂದರು.