ಹಾಸನ :- ವ್ಯಂಗ್ಯದ ಮಾತು ನಿಲ್ಲಿಸದಿದ್ದರೆ ನನ್ನ ಶಕ್ತಿ ತೋರಿಸುವೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಎಚ್.ಡಿ. ಕುಮಾರಸ್ವಾಮಿ ಅವರು ಈಗಾಗಲೇ 2-3 ಬಾರಿ ಸಾರ್ವಜನಿಕವಾಗಿ ನನ್ನ ಹಿಂದಿನ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದು, ಮಜ್ಜಿಗೆ ಮಾರಾಟ ಮಾಡುತ್ತಿದ್ದವರು ಎಂದು ಅಪಹಾಸ್ಯ ಮಾಡಿದ್ದಾರೆ’ ಎಂದರು.
ಈ ರೀತಿ ಹೇಳುವ ಮೂಲಕ ಅವರ ಗೌರವವನ್ನು ಅವರೇ ಕಳೆದುಕೊಳ್ಳುತ್ತಿದ್ದಾರೆ. ನಾನು ರಾಜಕೀಯಕ್ಕೂ ಮುನ್ನ ಜೀವನೋಪಾಯಕ್ಕೆ ಈ ರೀತಿ ವ್ಯವಹಾರ ಮಾಡಿರಬಹುದು. ಅದನ್ನೇ ನೆಪವಾಗಿ ಇಟ್ಟುಕೊಂಡು ಹಿಯಾಳಿಸುವ ಕೆಲಸ ಮಾಡಬಾರದು. ಮತ್ತೊಬ್ಬರ ತೇಜೋವಧೆ ಬೇಡ’ ಎಂದು ಹೇಳಿದರು.
‘ನನ್ನ ಬಗ್ಗೆ ಮಾತನಾಡುವ ಅವರು. ಈ ಹಿಂದೆ ಬಿಬಿಎಂಪಿಯಲ್ಲಿ ಕಸ ಎತ್ತುವ ಟೆಂಡರ್ ಪಡೆದಿದ್ದರು. ಅದನ್ನು ನಾನು ಹೇಳಿದರೆ, ನನಗೂ ಅವರಿಗೂ ವ್ಯತ್ಯಾಸ ಇರುವುದಿಲ್ಲ’ ಎಂದರು.
‘ಕ್ಷೇತ್ರದ ಜನರ ಆಶಯದಂತೆ ನಾನು ಪಕ್ಷಾಂತರ ಮಾಡಿ ಕಾಂಗ್ರೆಸ್ ಸೇರಿದ್ದೇನೆ. ಆದರೆ ಇವರು ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದಾರೆ. ಅವರು ದೊಡ್ಡವರು. ನಾವು ಅದನ್ನು ಕೇಳಬಾರದೇ’ ಎಂದು ಪ್ರಶ್ನಿಸಿದರು .