ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನ ಮೈದಾನವಾಗಿಯೂ ಇರುತ್ತೆ. ಆಟದ ಮೈದವಾಗಿಯೂ ಇರುತ್ತೆ. ನಾನಿರುವವರೆಗೆ ಅದನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ ಅಂತ ಶಾಸಕ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಈದ್ಗಾ ಮೈದಾನ ಹಾಗೂ ಆಟದ ಮೈದಾನ ವಿವಾದದ ಬಗ್ಗೆ ಸ್ಪಷ್ಟಿಕರಣ ನೀಡಿರುವ ಜಮೀರ್, ನಾನು ಶಾಸಕನಾಗಿರುವವರೆಗೆ ಇದನ್ನ ಬದಲಿಸಲು ಯಾರಿಂದಲು ಸಾಧ್ಯವಿಲ್ಲ. ಈ ಬಗ್ಗೆ ಸಭೆ ಮಾಡಿದ್ದಾರೆ ಅಂತ ಗೊತ್ತಾಯ್ತು. ಸಭೆಯ ಉದ್ದೇಶ ಏನು ಅಂತ ಅರ್ಥ ಆಗ್ತಿಲ್ಲ. ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ ಅಂತಿದ್ದಾರೆ. ಆಟದ ಮೈದಾನ ತೆಗೀತಾರೆ ಅಂತ ಯಾರು ಹೇಳಿದ್ದು? 2005ರವರೆಗೆ ಚಾಮರಾಜಪೇಟೆಯಲ್ಲಿ ಹಿಂದೂ, ಮುಸ್ಲಿಂ ಗಲಾಟೆ ಆಗುತಿತ್ತು. ನಾನು ಶಾಸಕನಾದ ಮೇಲೆ ಚಾಮರಾಜಪೇಟೆಯಲ್ಲಿ ಗಲಾಟೆ ಇಲ್ಲ. ಹಿಂದೂ, ಮುಸ್ಲಿಂ ಎಲ್ಲಾ ಶಾಂತಿಯಿಂದ ನೆಮ್ಮದಿಯಾಗಿ ಬದುಕುತ್ತಿದ್ದೇವೆ ಎಂದರು.

ಕಳೆದೊಂದು ತಿಂಗಳಿನಿಂದ ಈದ್ಗಾ ವಿವಾದಕ್ಕೆ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿದೆ. ಚಾಮರಾಜಪೇಟೆ ಆಟದ ಮೈದಾನ ಮುಸ್ಲಿಮರಿಗೆ ಸೇರಿಲ್ಲ. ಇದು ನಮ್ಮ ಸ್ವತ್ತು ಅಂತ ಸ್ಥಳೀಯರು, ಸಂಘಟನೆಗಳು ಕಿಡಿಕಾರಿವೆ. ಚಾಮರಾಜಪೇಟೆ ಆಟದ ಮೈದಾನ ಉಳಿವಿಗಾಗಿ ಇದೇ 12ಕ್ಕೆ ಚಾಮರಾಜಪೇಟೆ ಬಂದ್ಗೆ ಕರೆ ಕೊಟ್ಟಿವೆ. ಬೆಳಗ್ಗೆ 6 ರಿಂದ ಸಂಜೆ 6 ಘಂಟೆಯ ತನಕ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಸಂಪೂರ್ಣ ಸ್ಥಬ್ದಗೊಳ್ಳಲಿದೆ. ಆದ್ರೆ ಬಂದ್ ಗೆ ಮುಸ್ಲಿಂ ವ್ಯಾಪಾರಿಗಳು ಬೆಂಬಲ ಸೂಚಿಸಿಲ್ಲ. ಯಾವುದೇ ಕಾರಣಕ್ಕೂ ಅಂಗಡಿಗಳನ್ನು ಮುಚ್ಚುವುದಿಲ್ಲ. ಲಾಸ್ ಆದರೆ ಯಾರು ನಷ್ಟ ತುಂಬಿ ಕೊಡುವುದಿಲ್ಲ. ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತೇವೆ ಎಂದಿದ್ದಾರೆ.