ಬೆಳಗಾವಿ:- ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದ್ರೆ ನಾನು ಸಿಎಂ ಆಗುವುದು ಖಚಿತ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೇ ಉತ್ತರ ಕರ್ನಾಟಕದ, ನಾನೇ ಮುಖ್ಯಮಂತ್ರಿಯಾಗುತ್ತೇನೆ. ಜಾತಿ ಜಾತಿ ಅಂತ ನೋಡದೆ, ದೇಶ ಉಳಿಸುವುದಕ್ಕಾಗಿ ಎಲ್ಲರೂ ವೋಟ್ ಹಾಕಿ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
ಬಿಸಿಲಿನ ತಾಪಕ್ಕೆ ಹೀಟ್ ಸ್ಟ್ರೋಕ್ ಕೇಸ್ ಸಂಖ್ಯೆ ಏರಿಕೆ – ಆಸ್ಪತ್ರೆಗಳಲ್ಲಿ ಅಲರ್ಟ್!
ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿ, ಸಾಹುಕಾರ್ ಸಾಹುಕಾರ್ ಯಾಕೆ ಅನ್ನುತ್ತೀರಿ. ಅವರ ಮನೆಯ ತೊಟ್ಟಿಲನಲ್ಲಿರುವ ಕಂದಮ್ಮಗಳಿಗೂ ನಮಸ್ಕರಿಸುತ್ತೀರಿ. ಯಾಕೆ ನಿಮಗೆ ಸ್ವಾಭಿಮಾನ ಇಲ್ಲವೇ? ನಿಮ್ಮ ಜಮೀನಿನಲ್ಲಿ ಕಬ್ಬು ಬೆಳಯುತ್ತೀರಾ ಅಥವಾ ಅವರ ಜಮೀನಿನಲ್ಲಿ ಬೆಳೆಯುತ್ತೀರಾ? ಯಾರಿಗೂ ನಮಸ್ಕರಿಸಬೇಡಿ, ಸ್ವಾವಲಂಭಿಗಳಾಗಿ. ಪ್ರಧಾನಿ ನರೇಂದ್ರ ಮೋದಿಯವರೇ ಕಾಲಿಗೆ ನಮಸ್ಕಾರ ಮಾಡಿಸಿಕೊಳ್ಳುವುದಿಲ್ಲ. ಅಂದಮೇಲೆ ಇವರ ಕಾಲಿಗೆ ಏಕೆ ನಮಸ್ಕಾರ ಮಾಡುತ್ತೀರಿ ಎಂದು ಗುಡುಗಿದರು.
ನಾನು ಯಾರಿಗೂ ಅಪ್ಪಾಜಿ ಅಪ್ಪಾಜಿ ಅಂತ ಕಾಲಿಗೆ ನಮಸ್ಕರಿಸುವುದಿಲ್ಲ. ದೇವರು ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ನಾನು ಯಾರಿಗೂ ವಂಚನೆ ಮಾಡುವುದಿಲ್ಲ. ರೈತರು ಬರಗಾಲ ಬರಲಿ ಅಂತ ಬಯಸುತ್ತಾರೆ, ಐದು ಲಕ್ಷದ ಆಸೆಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂತ ಹೇಳಿದರು. ವಿಧಾನಸೌಧದಲ್ಲಿ ಇದೇ ವಿಚಾರದಲ್ಲಿ ನನಗೂ ಅವರಿಗೂ ಜಗಳ ಆಯ್ತು. ನಾನು ಹಾಗೇ ಅಂದಿಲ್ಲ ಅಂದರು. ನಿನ್ನ ಮೇಲೆ ಕೇಸ್ ಹಾಕುತ್ತೇನೆ ಅಂದರು. ನನ್ನ ಮೇಲೆ ಈಗಾಗಲೆ 100 ಕೇಸ್ ಇದೆ, ಇದೊಂದು ಹೆಚ್ಚಲ್ಲ, ಕೇಸ್ ಹಾಕಿ ಅಂದೆ ಎಂದು ಯತ್ನಾಳ್ ಸಭೆಯಲ್ಲಿ ಹೇಳಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)