ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ತೋರಿದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ರಾಜ್ಯ ಸರ್ಕಾರಕ್ಕೆ ವೀರಶೈವ ಮಹಾಸಭಾ ಎಚ್ಚರಿಕೆ ನೀಡಿದೆ.
Murder Case: ಕೊಲೆ ನಡೆದ ಸ್ಥಳದಲ್ಲಿ ಗಳಗಳನೆ ಕಣ್ಣೀರು ಹಾಕಿದ ಪವಿತ್ರಾ.. ಕೈಕಟ್ಟಿ ನಿಂತ ದರ್ಶನ್!
ರೇಣುಕಸ್ವಾಮಿ ಹತ್ಯೆಗೈದವರಿಗೆ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಲು ಮಹಾಸಭೆಯು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ. ಚಿತ್ರದುರ್ಗದ ರೇಣುಕಸ್ವಾಮಿಯವರ ಹತ್ಯೆಯನ್ನು ಅಖಿಲ ಭಾರತ ವೀರಶೈವ ಮಹಾಸಭೆಯು ಉಗ್ರವಾಗಿ ಖಂಡಿಸುತ್ತದೆ. ಈ ಕೃತ್ಯವೆಸಗಿರುವವರಿಗೂ ಹಾಗೂ ಕೃತ್ಯಕ್ಕೆ ಸಹಕಾರ ನೀಡಿದ ಎಲ್ಲ ವ್ಯಕ್ತಿಗಳಿಗೂ ಅತ್ಯಂತ ಶಿಕ್ಷೆಗೆ ಒಳಪಡಿಸುವಂತೆ ಮಹಾಸಭೆಯು ಸರ್ಕಾರವನ್ನು ಒತ್ತಾಯಿಸುತ್ತದೆ ಅಂತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೇ, ಆರೋಪಿ ಸ್ಥಾನದಲ್ಲಿರುವವರನ್ನು ರಕ್ಷಿಸದೇ, ಸರ್ಕಾರವು ಶ್ರೀಸಾಮಾನ್ಯನ ಜೊತೆಗೆ ನಿಲ್ಲುತ್ತದೆ ಎಂಬುದನ್ನು ಈ ಘಟನೆಯಲ್ಲಿ ತೋರಿಸಬೇಕಾಗಿದೆ. ಸರ್ಕಾರವು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲು ಮಹಾಸಭೆಯು ತೀರ್ಮಾನಿಸಬೇಕಾಗುತ್ತದೆ ಅಂತ ವೀರಶೈವ ಮಹಾಸಭಾ ಎಚ್ಚರಿಕೆ ನೀಡಿದೆ.
ಘಟನೆಯಿಂದ ಪ್ರಭಾವಿ ವ್ಯಕ್ತಿಗಳ ಪರನಿಲ್ಲದೇ ಮೃತನ ಕುಟುಂಬದ ಜೊತೆ ನಿಲ್ಲುವುದು ಆದ್ಯ ಕರ್ತವ್ಯವಾಗಿದೆ. ಆ ಕುಟುಂಬಕ್ಕೆ ಅಗತ್ಯ ನೆರವನ್ನು ನೀಡುವಂತೆ ಸರ್ಕಾರವನ್ನು ಮಹಾಸಭೆಯು ಒತ್ತಾಯಿಸುತ್ತದೆ. ಮಹಾಸಭೆಯು ರೇಣುಕಾಸ್ವಾಮಿಯವರ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದು, ಅವರ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಸದಾ ಸಿದ್ಧವಾಗಿದೆ ಅಂತ ಅಖಿಲ ಭಾರತ ವೀರಶೈವ ಮಹಾಸಭಾ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.