ಕಲಬುರ್ಗಿ:- ಹಬ್ಬಗಳು ಬಂದ್ರೆ ಸಾಕು ನನಗೆ ಪೊಲೀಸ್ ನೋಟಿಸ್ ಬರುತ್ತೆ ಎಂದು ಸಿದ್ದಲಿಂಗ ಸ್ವಾಮೀಜಿ ಹೇಳಿದ್ದಾರೆ.
ಹಿಂದೂತ್ವದ ಸೂನಾಮಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಎದ್ದಿದೆ. ಹಿಂದೂ ಧರ್ಮದ ಉಳಿವಿಗಾಗಿ ನಾವು ಹೋರಾಟ ಆರಂಭಿಸಿದ್ದೇವೆ. ಹಿಂದೂತ್ವದ ಗೆಲುವು ಬಿಜೆಪಿ ಹಿರಿಯ ನಾಯಕರಿಗೆ ಅರ್ಪಿಸುತ್ತೇವೆ. 2022 ರಲ್ಲಿ ಆಳಂದದಲ್ಲಿ ದೊಡ್ಡಮಟ್ಟದ ದಂಗಲ್ ಎಬ್ಬಿಸಲಾಗಿತ್ತು. ನಮ್ಮ ಮೇಲೆ ದಾಳಿ ಮಾಡಲು ಬಾಬರನ ಮೊಮ್ಮಕ್ಕಳು ಹೊಂಚು ಹಾಕಿದ್ದರು. 100 ಜನರಿಗೆ ಪೂಜೆ ಮಾಡಲು ವಕ್ಫ್ ಬೋರ್ಡ್ ಗೆ ಅರ್ಜಿ ಸಲ್ಲಿಸಿದ್ದೆವು ಎಂದು ಹೇಳಿದ್ದಾರೆ.
ಆಳಂದ ಪಟ್ಟಣದ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿದ್ದೆವು. ಆದರೆ ನಮ್ಮ ಮನವಿಯನ್ನ ವಕ್ಫ್ ಬೋರ್ಡ್ ತಿರಿಸ್ಕರಿಸಿತ್ತು. ಆದರೆ ಕಲಬುರಗಿ ಹೈಕೋರ್ಟ್ ಪೀಠ 15 ಜನರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿತ್ತು. ಭಾರತ ಮಾತೆ ಜನ್ಮಕೊಟ್ಟಂತಹ ಈ ರಕ್ತ ಯಾರಿಗೂ ಹೆದರಲ್ಲ ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯರ ಗ್ಯಾರಂಟಿಗಳನ್ನ ಬೆನ್ನತ್ತಿ ಜನ ಎಲ್ಲವನ್ನ ಕಳೆದುಕೊಳ್ಳುತ್ತಿದ್ದಾರೆ. ಹೈಕೋರ್ಟ್ನಲ್ಲಿ ವಾದ ಮಂಡಿಸಿ ದರ್ಗಾದಲ್ಲಿ ಶ್ರೀ ರಾಘವ ಚೈತನ್ಯ ದೇವಸ್ಥಾನ ಸ್ಥಾಪಿಸುತ್ತೇವೆ. ಆ ದೇವಸ್ಥಾನವನ್ನ ಯುಪಿ ಸಿಎಂ ಯೋಗಿ ಆದಿತ್ಯಾನಾಥ್ರಿಂದ ಉದ್ಘಾಟಿಸಲಾಗುವುದು. ನಾನು ದ್ವೇಷದ ಭಾಷಣ ಮಾಡುವುದಿಲ್ಲ. ನಾನು ದೇಶದ ಭಾಷಣ ಮಾಡುತ್ತಿದ್ದೇನೆ.
ರಾಹುಲ್ ಬಾಬಾ ಪ್ರಧಾನಿಯಾಗಿದ್ದರೆ ಮೇಲೆ ರಾಮಮಂದಿರ, ಕೆಳಗೆ ಬಾಬರ್ನ ಮಂದಿರ ಮಾಡುತ್ತಿದ್ದರು. ಪಾಕಿಸ್ತಾನ್ ಜಿಂದಾಬಾದ್ ಹೇಳೆ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದರು. ಆದರೆ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ನಿಜವಾಗಿದೆ. ಇದೀಗ ಪ್ರಿಯಾಂಕ್ ಖರ್ಗೆರ ಮುಖ ಕಪ್ಪೆ ಥರ ಆಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.