ರಾಮನಗರ: ನಾನು ಪಾರ್ಲಿಮೆಂಟ್ಗೆ (Parliament) ಹೋಗಬಾರದೆಂದು ನಿರ್ಧಾರ ಮಾಡಿದ್ದೇನೆ. ರಾಜ್ಯ ರಾಜಕೀಯದಲ್ಲಿ ಇರಬೇಕೆಂಬುದು ನನ್ನ ನಿಲುವು ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ (CP Yogeshwar) ಹೇಳಿದ್ದಾರೆ. ಚನ್ನಪಟ್ಟಣದಲ್ಲಿ (Channapatna) ಎ.ಮಂಜುನಾಥ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಯೋಗೇಶ್ವರ್ ಮಾತನಾಡಿದರು. ಸಿಪಿವೈ ಸ್ಪರ್ಧೆ ಮಾಡದೇ ಈಗಲೂ ನನಗೆ ಬೆಂಬಲ ನೀಡಿದ್ದಾರೆಂಬ ಡಿ.ಕೆ.ಸುರೇಶ್ (DK Suresh) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು,
5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ದರೆ ಸುರೇಶ್ ಗೆಲ್ಲುತ್ತಿರಲಿಲ್ಲ. ಹಾಗಾಗಿ ಈ ಬಾರಿ ಬುಡಸಮೇತ ತೆಗೆಯಬೇಕು ಎಂದು ಮಂಜುನಾಥ್ (Dr Manjunath) ಅವರನ್ನು ತಂದಿದ್ದೇವೆ. ಡಿ.ಕೆ.ಸುರೇಶ್ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮಂಜುನಾಥ್ ಅವರ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ. ಡಾ.ಮಂಜುನಾಥ್ ವಿರುದ್ಧ ಗೆಲುವು ಸುಲಭವಿದ್ದರೆ ಕುಕ್ಕರ್, ಹಣ ಯಾಕೆ ಕೊಡುತ್ತಿದ್ದರು ಎಂದು ಪ್ರಶ್ನಿಸಿದರು.
Karnataka Jobs Alert: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ʼನ್ಯೂಸ್! 247 PDO ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಳೆದ ಬಾರಿ ಮುನಿರತ್ನ ಕಾಂಗ್ರೆಸ್ (Congress) ಪರವಾಗಿದ್ದರು. ಆದರೂ ಬಿಜೆಪಿಗೆ ಅಲ್ಲಿ 30,000 ಲೀಡ್ ಇತ್ತು. ಇವತ್ತು ಮುನಿರತ್ನ ಬಿಜೆಪಿಯಲ್ಲಿದ್ದಾರೆ. ನಮ್ಮ ದೌರ್ಭಾಗ್ಯ ಬಿಜೆಪಿ-ಜೆಡಿಎಸ್ ಕಿತ್ತಾಡಿ ಅವರಿಗೆ ಲಾಭ ಆಗಿತ್ತು. ಈಗ ನಾವು, ಜೆಡಿಎಸ್ನವರು ಒಂದಾಗಿದ್ದೇವೆ. ದೇವೇಗೌಡರು ಬಿಜೆಪಿ ಜೊತೆಗೆ ಒಂದಾಗಿದ್ದಾರೆ. ಹಾಗಾಗಿ ನಮ್ಮ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.