ದಾವಣಗೆರೆ:- ಬಿಜೆಪಿಯವರಿಗೆ ತಾಕತ್ ಇದ್ರೆ ಒಗ್ಗಟ್ಟಾಗಿ ಅಭ್ಯರ್ಥಿ ಗೆಲ್ಲಿಸಿಕೊಂಡು ಬರಲಿ. ಒಂದು ಪಕ್ಷ ಗೆದ್ದು ಬಂದರೆ ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳುವ ಮೂಲಕ ಚನ್ನಗಿರಿ ಕೈ ಶಾಸಕ ಶಿವಗಂಗ ಬಸವರಾಜ್ ಸವಾಲ್ ಹಾಕಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯ ಬಿಜೆಪಿ ಟಿಕೆಟ್ ಸಂಸದ ಸಿದ್ದೇಶ್ವರ ಪತ್ನಿ ಗಾಯತ್ರಿಗೆ ನೀಡಿದ್ದಾರೆ. ಅದರ ವಿರುದ್ಧ ರೇಣುಕಾಚಾರ್ಯ ಟೀಂ ಬಂಡಾಯವೆದ್ದಿದೆ. ಇಬ್ಬರು ಒಗ್ಗಟ್ಟಾಗಿ ತಾಕತ್ ಇದ್ರೆ ಈ ಭಾರಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿಕೊಂಡು ಬರಲಿ. ಬಿಜೆಪಿಯ ಎರಡು ಟೀಂಗೆ ಕಾಂಗ್ರೆಸ್ ಶಾಸಕ ಸವಾಲ್ ಹಾಕಿದ್ದಾರೆ.
ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಒಂದು ಕತ್ತೆ ನಿಂತ್ರೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುತ್ತೇವೆ. ಬಿಜೆಪಿಯವರು ಬೇಕು ಅಂತಲೇ ಈ ರೀತಿ ಟೀಂ ಮಾಡಿಕೊಂಡಿದ್ದಾರೆ. ಬಿಜೆಪಿ ಸೋತರೆ ಒಗ್ಗಟ್ಟಿಲ್ಲದ್ದರಿಂದ ಸೋಲಾಯಿತು ಅಂತ ಹೇಳೋಕೆ ಕಾರಣ ಬೇಕು. ಅದಕ್ಕಾಗಿ ಹೀಗೆ ಟೀಂ ಮಾಡಿಕೊಂಡು ಓಡಾಡುತ್ತಿದ್ದಾರೆ. ಅವರಿಗೆ ತಾಕತ್ ಇದ್ರೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸಿಕೊಂಡು ಬರಲಿ ನೋಡೋಣ ಎಂದರು.
ಇನ್ನೂ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಿದ ವಿಚಾರವಾಗಿ ಮಾತನಾಡಿ, ಗೆಲ್ಲುವ ಅಭ್ಯರ್ಥಿ ಎಂದು ಪರಿಗಣಿಸಿ ಟಿಕೆಟ್ ನೀಡಿದ್ದಾರೆ. ಈ ಬಾರಿ ಮೋದಿಯ ದುರಾಡಳಿತ ಪರಿಣಾಮ ಬೀರುತ್ತದೆ. ಬಿಜೆಪಿಯವರ ಆಟ ನಡೆಯುವುದಿಲ್ಲ ಎಂದು ಹೇಳಿದ್ದಾರೆ.