ಬೆಳೆ ಪರಿಹಾರ ಬರಬೇಕೆಂದರೆ ನೀವು ಕೂಡಲೇ ಕಡ್ಡಾಯವಾಗಿ ಒಂದು ಕೆಲಸವನ್ನು ಮಾಡಬೇಕು, ಅದೇನೆಂದರೆ ಈಗಾಗಲೇ ಬರಗಾಲ ಘೋಷಣೆಯಾಗಿರುವ ತಾಲೂಕುಗಳಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಬೆಳೆ ಪರಿಹಾರವನ್ನು ನೀಡಲಾಗುತ್ತದೆ. 2023-24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್ ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2023″ ಹಾಗೂ ಆಯಾ ಗ್ರಾಮದ ಖಾಸಗಿ ನಿವಾಸಿಗಳ “ಮುಂಗಾರು ಬೆಳೆ ಸಮೀಕ್ಷೆ 2023-24″ ನ್ನು Download ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ.
ಇದಕ್ಕೆ ಬೇಕು ಎಫ್ಐಡಿ ಸಂಖ್ಯೆ (FID Number)
![Demo](https://ainlivenews.com/wp-content/uploads/2023/12/spoorthi-1.jpg)
ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ (FID number) ಕಡ್ಡಾಯವಾಗಿದೆ. ಇದನ್ನು ಕೃಷಿ ಇಲಾಖೆಯಿಂದ ಮಾಡಿಸಿಕೊಳ್ಳಬೇಕು. ಬರ ಪರಿಹಾರ, ಬೆಳೆ ವಿಮೆ, ವಿವಿಧ ಯೋಜನೆಯಡಿ ಯಂತ್ರೋಪಕರಣಗಳ ಸಹಾಯಧನ ಪಡೆಯಲು ಹೀಗೆ ಅನೇಕ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಈ ನಂಬರ್ ಅತಿ ಅವಶ್ಯಕವಾಗಿದೆ.
ಬರ ಪರಿಹಾರಕ್ಕಾಗಿ FID ನಂಬರ್ ಬೇಕೇ ಬೇಕು
ಬರ ಪರಿಹಾರದ ಹಣವನ್ನು ರೈತರು ಪಡೆದುಕೊಳ್ಳಬೇಕು ಎಂದರೆ ಇದಕ್ಕೆ ಎಫ್ಐಡಿ ಸಂಖ್ಯೆಯನ್ನು ಹೊಂದಬೇಕಾಗಿರುತ್ತದೆ. ಇಲ್ಲದಿದ್ದರೆ ಸರ್ಕಾರ ನಿಮ್ಮ ಖಾತೆಗೆ ಹಣ ಮಾಡುವುದಿಲ್ಲ. ಇಲ್ಲಿ ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆಯನ್ನು ಮಾಡಲಾಗಿದೆ.
ಎಫ್ಐಡಿ ಮಾಡಿಸದವರು ಈಗ ಏನು ಮಾಡಬೇಕು?
ಇದುವರೆಗೂ ಎಫ್ಐಡಿ ಮಾಡಿಸದೇ ಇದ್ದರೆ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಇಲ್ಲವೇ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಎಫ್ಐಡಿ ಮಾಡಿಸಬೇಕು.
ನೋಂದಣಿ ಹೇಗೆ? ಯಾವೆಲ್ಲ ದಾಖಲೆಗಳು ಬೇಕು?
ಸಮೀಪದ ಕೃಷಿ ಇಲಾಖೆ (ಹೋಬಳಿಯ ರೈತ ಸಂಪರ್ಕ ಕೇಂದ್ರ), ತೋಟಗಾರಿಕೆ ಇಲಾಖೆಗೆ ದಾಖಲೆಗಳೊಂದಿಗೆ ರೈತ ಭೇಟಿ ನೀಡಬೇಕು.
ಆರ್.ಟಿ.ಸಿ / ಪಹಣಿ / ಉತಾರ್, ಆಧಾರ್ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್ನ ಪಾಸ್ ಪುಸ್ತಕದ ಪ್ರತಿ, ಪಾಸ್ಪೋರ್ಟ್ ಅಳತೆಯ ಫೋಟೊ, ಮೊಬೈಲ್ ನಂಬರ್ ನೀಡಿದರೆ ನಿಮ್ಮ ಹೆಸರು ಪೋರ್ಟಲ್ನಲ್ಲಿ ಸೇರ್ಪಡೆಗೊಂಡು ಬಳಿಕ ಎಫ್.ಐ.ಡಿ. (FID) ನಂಬರ್ ದೊರೆಯುತ್ತದೆ.
ಮೊಬೈಲ್ನಲ್ಲಿಯೇ FID ಸಂಖ್ಯೆ ಪಡೆಯಿರಿ!
ಎಫ್ಐಡಿ ಸಂಖ್ಯೆಯನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಪಡೆಯಬಹುದಾಗಿದೆ. ಇದಕ್ಕೆ ನೀವು ಕೆಲವು ನಿಯಮಗಳನ್ನು ಅನುಸರಿಸಬೇಕು. ಇಲ್ಲಿ ಕೆಳಗಿನ ಹಂತಗಳನ್ನು ಅನುಸರಿಸಿ ಎಫ್ಐಡಿ ನಂಬರ್ ಅನ್ನು ನೀವೇ ಪಡೆಯಿರಿ.
ಹೀಗೆ ವಿವರಗಳನ್ನು ದಾಖಲಿಸುವದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವದರಿಂದ ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)