ಬೆಂಗಳೂರು: ಹಾಸನ ಪೆನ್ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಬಗ್ಗೆ ನಮಗೆ ಮಾಹಿತಿ ಇಲ್ಲ. ನಿಮಗೇನಾದರೂ ಇದ್ದರೆ ನಮಗೆ ತಿಳಿಸಿ. ನಿಮಗೆ ಗೊತ್ತಿದ್ದರೆ ಹೇಳಿ ನಮಗೆ ಸಹಾಯ ಆಗುತ್ತದೆ ಎಂದು ಮಾಧ್ಯಮಗಳ ಮುಂದೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೇಳಿಕೊಂಡ ಪ್ರಸಂಗ ನಡೆಯಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳ ಪತ್ರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಸಾಹಿತಿಗಳು ಅನೇಕ ವಿಷಯಗಳನ್ನು ಗಮನಿಸುತ್ತಾರೆ. ಸಿಎಂಗೆ ಪತ್ರ ಬರೆದಿದ್ದಾರೆ, ತರಿಸಿಕೊಂಡು ನೋಡುತ್ತೇನೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
ಹೆಂಡತಿಯ ಪ್ರಜ್ಞೆ ತಪ್ಪಿಸಿ ಪರಪುರಷರಿಂದ ಅತ್ಯಾಚಾರ ಮಾಡಿಸ್ತಿದ್ದ ಪತಿ.! ಪಾಪಿ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ..?
ಸಿಎಂಗೆ ಬರೆದ ಪತ್ರದಲ್ಲಿ ಅವರು ಉಲ್ಲೇಖ ಮಾಡಿದ್ದನ್ನು ಎಸ್ ಐಟಿ ಪರಿಗಣಿಸುತ್ತೆ ಎಂದ ಅವರು, ಪ್ರಕರಣದ ಹಿಂದೆ ತಿಮಿಂಗಿಲ ಇದೆ ಎಂಬ ಮಾಜಿ ಸಿಎಂ ಎಚ್ಡಿಕೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿ ತಿಮಿಂಗಿಲ ಯಾರು ಅಂತ ಹೇಳಲಿ. ಅವರಿಗೆ ಗೊತ್ತಿದೆ ಅಂದ ಮೇಲೆ ಹೇಳಬೇಕು ಅಲ್ವಾ? ಹೇಳದೆ ಇರುವುದೆ ದೊಡ್ಡ ತಪ್ಪು. ದಾಖಲೆ ಕೊಟ್ಟ ಮೇಲೆ ತನಿಖೆ ಮಾಡುತ್ತೇವೆ. ಮೊದಲು ದಾಖಲೆ ಕೊಡಲಿ. ಕೊಟ್ಟ ಮೇಲೆ ನಾವು ತನಿಖೆ ಮಾಡದಿದ್ರೆ ತಪ್ಪಾಗುತ್ತದೆ ಎಂದು ತಿರುಗೇಟು ನೀಡಿದರು.