ಬೆಂಗಳೂರು: ಹೊಸ ರೇಷನ್ ಕಾರ್ಡ್ ಗಳನ್ನು ಪಡೆಯಲು ಬಯಸುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಕೂಡ ಸರ್ಕಾರ ಅವಕಾಶವನ್ನು ನೀಡಿದ್ದು, ಅದೇ ರೀತಿ ಮೂರು ಲಕ್ಷಕ್ಕೂ ಹೆಚ್ಚಿನ ಅರ್ಜಿ ಸಲ್ಲಿಕೆಗಳು ಆಗಿದೆ. ಕರ್ನಾಟಕದಲ್ಲಿ ಕೂಡ ಮೂರು ಲಕ್ಷ ರೇಷನ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆ ಜನರು. ಈ ಮೂರು ಲಕ್ಷ ರೇಷನ್ ಕಾರ್ಡ್ ಗಳಲ್ಲಿ ಸಾಕಷ್ಟು ರೇಷನ್ ಕಾರ್ಡ್ ಗಳು ಕೂಡ ರದ್ದಾಗಿದೆ. ಕೆಲವೊಂದು ರೇಷನ್ ಕಾರ್ಡ್ ಗಳು ಮಾತ್ರ ಅರ್ಹ ಪಟ್ಟಿಯಲ್ಲಿ ಬಂದಿವೆ, ಅಂತಹ ಅರ್ಹರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ಗಳು ಕೂಡ ವಿತರಣೆ ಆಗುತ್ತದೆ.
ಇನ್ನೂ ರಾಜಧಾನಿ ಬೆಂಗಳೂರು ಒನ್, ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾತ್ರ ಹೊಸ ಪಡಿತರ ಚೀಟಿಗೆ ಪರಿಗಣಿಸಲು ಆಹಾರ ಇಲಾಖೆ ನಿರ್ಧರಿಸಿದೆ. ಹೊಸ ಪಡಿತರ ಚೀಟಿಗಾಗಿ ಖಾಸಗಿ ಸೈಬರ್ ಕೇಂದ್ರಗಳ ಮೂಲಕ ಸಲ್ಲಿಸುವ ಅರ್ಜಿಗಳನ್ನು ಮಾನ್ಯ ಮಾಡದಿರಲು ಆಹಾರ ಇಲಾಖೆ ತೀರ್ಮಾನಿಸಿದ್ದು, ಸೈಬರ್ ಕೇಂದ್ರಗಳು ಹೊಸ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಹೆಚ್ಚಿನ ಹಣ ಪಡೆಯುತ್ತವೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ನೆನಪಿಡಿ.. ಅಪ್ಪಿತಪ್ಪಿಯೂ ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ..!
ಜೂನ್ ಮೊದಲ ವಾರದಲ್ಲಿ ಹೊರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಿದ್ದು, ಪ್ರಮುಖ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.
![](https://ainlivenews.com/wp-content/uploads/2024/01/Ad-Banner-copy-scaled.jpg)