ಬೆಂಗಳೂರು: ಟಿಡಿಪಿ ಮುಖ್ಯಸ್ಥ(Chandrababu Naidu) ಎನ್ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ(Andhra Pradesh) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ JDS ಉಪಾಧ್ಯಕ್ಷ ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ (TA Sharavana)ಅವರು ಶುಭ ಹಾರೈಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು,
ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿರಿಯ ನಾಯಕರು, ನನ್ನ ಆತ್ಮೀಯ ಮಿತ್ರರಾದ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರಿಗೆ ಹೃದಯಪೂರ್ವಕ ಶುಭಾಶಯಗಳು. ತಮ್ಮ ನೇತೃತ್ವದಲ್ಲಿ (Andhra Pradesh) ಆಂಧ್ರ ಪ್ರದೇಶವು ಆಮೂಲಾಗ್ರವಾಗಿ ಅಭಿವೃದ್ಧಿ ಕಾಣಲಿ ಹಾಗೂ ಜನತೆಗೆ ತಮ್ಮಿಂದ ಒಳ್ಳೆಯದಾಗಲಿ ಎಂದು ತುಂಬು ಹೃದಯದಿಂದ ಹಾರೈಸುತ್ತೇನೆ ಎಂದು ಕರ್ನಾಟಕ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರು ಶುಭ ಹಾರೈಸಿದರು.
ಈ ಬಾರಿ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲ 175 ಸ್ಥಾನಗಳ ಪೈಕಿ 135ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಡಿಪಿ ಸಂಪೂರ್ಣ ಬಹುಮತ ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi), ಗೃಹ ಸಚಿವ ಅಮಿತ್ ಶಾ, ನಟ ರಜನಿಕಾಂತ್, ಪವನ್ ಕಲ್ಯಾಣ್ ಸಹೋದರ ಚಿರಂಜೀವಿ ಸೇರಿದಂತೆ ಸಿನಿಮಾ ತಾರೆಯರು, ಎನ್ಡಿಎ(NDA) ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.