ಶಿವಮೊಗ್ಗ : ರಾಜ್ಯದ ಎರಡನೇ ಹಂತದ ಚುನಾವಣೆಯ ಭಾಗವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ದಲ್ಲೂ ಮತದಾನ ಪ್ರಕ್ರಿಯೆ ಬಹುತೇಕ ಮುಕ್ತಾಯಕ್ಕೆ ಬಂದಿದೆ. ಆದರೆ, ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಭಿನ್ನಮತ ಇನ್ನೊಂದು ಹಂತಕ್ಕೆ ತಲುಪುವತ್ತ ಸಾಗುತ್ತಿದೆ. ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಸೋಲುವ ಭೀತಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಾಮಮಾರ್ಗಕ್ಕೆ ಇಳಿದಿದ್ದಾರೆ.
ನಲವತ್ತು ವರ್ಷಗಳ ರಾಜಕೀಯದಲ್ಲಿ ಇಂತಹ ನೀಚ ರಾಜಕಾರಣವನ್ನು ನೋಡಲಿಲ್ಲ ಎಂದು ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ. ” ಮಾನ್ಯ ರಾಘವೇಂದ್ರ ಅವರು ಚುನಾವಣೆಯಲ್ಲಿ ಪರಾಭವಗೊಳ್ಳುವ ಹೆದರಿಕೆಯಿಂದ ಅನೇಕ ಕ್ರೈಂಗಳನ್ನು ಮಾಡುತ್ತಿದ್ದಾರೆ. ನನ್ನ ಪರವಾಗಿ ಈಶ್ವರಪ್ಪ ಪ್ರಚಾರ ಮಾಡುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ಚುನಾವಣಾ ಸೋಲಿನ ಭೀತಿಯಲ್ಲಿ ರಾಜಕೀಯ ಷಡ್ಯಂತ್ರ ಮಾಡಲು ಹೊರಟಿದ್ದಾರೆ ” ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ಈಶ್ವರಪ್ಪ ಗೆಲ್ಲುತ್ತಾರೆ ಎನ್ನುವ ಲೆಕ್ಕಾಚಾರ ಅವರಿಗೆ ಬಂದಿದೆ, ಹಾಗಾಗಿ ನನ್ನ ಹಳೆಯ ವಿಡಿಯೋವನ್ನು ಮತ್ತು ಈಶ್ವರಪ್ಪ ಬೆಂಬಲವಿದೆ ಎನ್ನುವ ಸುದ್ದಿಯನ್ನು ಹರಡಿಸುತ್ತಿದ್ದಾರೆ. ನನಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಕರೆಗಳ ಮೇಲೆ ಕರೆಗಳು ಬರುತ್ತಿವೆ ಎಂದು ಈಶ್ವರಪ್ಪ ಹೇಳಿದ್ದಾರೆ.