ಬೆಂಗಳೂರು: ವೈರಲ್ ಆಗಿರುವ ವೀಡಿಯೋದಲ್ಲಿ ಯಾರೇ ಇದ್ರೂ ಕ್ರಮ. ನಮ್ಮ ಕುಟುಂಬದವರು ಇದ್ದರೂ ರಕ್ಷಣೆ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಇಂದು ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇತ್ತೀಚೆಗೆ ಅತ್ಯಂತ ಕೆಟ್ಟ ರೀತಿಯ ಬೆಳವಣಿಗೆ ನಡೆದಿದೆ.
ಸಮಾಜದಲ್ಲಿ ಉತ್ತಮ ಬದುಕು ಕಾಣಬೇಕು. ಅಂತಹ ಬದುಕಿಗೆ ಯಾವ ರೀತಿ ಧಕ್ಕೆ ಉಂಟಾಗಿದೆ. ಇದು ನೋವಿನ ಸಂಗತಿಯಾಗಿದೆ. ಏ.21 ರಂದು ಪೆನ್ಡ್ರೈವ್ ಅನ್ನು ಇಡೀ ರಾಜ್ಯಾದ್ಯಂತ ಬಿಡುಗಡೆ ಮಾಡಿದ್ರು. ಪೊಲೀಸ್ ಅಧಿಕಾರಿಗಳನ್ನ ಇಟ್ಟು ಹಂಚಿದ್ದಾರೆ. ಮಂಡ್ಯ, ಬೆಂಗಳೂರು ಗ್ರಾಮಾಂತರದಲ್ಲಿ ಸೇರಿ ಹಲವು ಕಡೆ ಮಾಡಿದ್ದಾರೆ ಎಂದು ದೂರಿದರು.
Hair Care: ಕೂದಲು ದಟ್ಟವಾಗಿರಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು ಗೊತ್ತಾ?
ಪೂರ್ಣ ಚಂದ್ರ ಅಂತ ಪ್ರಜ್ವಲ್ ಏಜೆಂಟ್ ಇದ್ದರು. ಅವರು ಈ ಸಂಬಂಧ ಏಪ್ರಿಲ್ 22 ರಂದು ಹಾಸನ ಡಿಸಿಗೆ ದೂರು ಕೊಟ್ರು. ಚುನಾವಣೆ ಅಧಿಕಾರಿಗಳೂ ದೂರು ಕೊಟ್ಟಿದ್ದಾರೆ. 21 ರಂದು ರಾತ್ರಿ ಪ್ರಜ್ವಲ್ ವಿಡಿಯೋ ಬಿಡುಗಡೆ ಕ್ಷಣಗಣನೆ ಅಂತ ಲಿಂಕ್ ಕೊಟ್ಟಿದ್ದಾರೆ. ವೀಡಿಯೋದಲ್ಲಿ ಯಾರೇ ಇದ್ದರೂ ರಕ್ಷಣೆ ಕೊಡಲ್ಲ. ನಮ್ಮ ಕುಟುಂಬದವರೇ ಆದರು ರಕ್ಷಣೆ ಮಾಡಲ್ಲ ಎಂದು ಹೆಚ್ಡಿಕೆ ಖಡಕ್ ಆಗಿ ತಿಳಿಸಿದ್ದಾರೆ.
ನೆಲದ ಕಾನೂನು ಪ್ರಕಾರ ಶಿಕ್ಷೆ ಆಗಲಿ. ನಮ್ಮ ನಾಡಿನ ತಾಯಂದಿರ ಮುಂದೆ ಹೇಳ್ತೀನಿ. ಯಾವ ವ್ಯಕ್ತಿಯನ್ನೂ ನಾನು ರಕ್ಷಣೆ ಮಾಡಲ್ಲ. ವೀಡಿಯೋ ಬಿಡುಗಡೆ ಮಾಡ್ತೀನಿ ಅಂತ ನವೀನ್ ಗೌಡ ರಾತ್ರಿ 8ಕ್ಕೆ ಹೇಳಿದ್ದಾನೆ. ಪ್ರಜ್ವಲ್ ಏಜೆಂಟ್ ದೂರು ಕೊಟ್ಟ ಮೇಲೆ ಎಫ್ಐಆರ್ ದಾಖಲಾಗಿದೆ. ನವೀನ್, ಕಾರ್ತಿಕ್, ಚೇತನ್, ಪುಟ್ಟರಾಜು ಮೇಲೆ ದೂರು ಕೊಟ್ಟರು. ಎಫ್ಐಆರ್ ಹಾಕಿದ್ರೂ ಈ ಕ್ಷಣದವರೆಗೆ ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.