ಬೆಂಗಳೂರು: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಶೀಘ್ರದಲ್ಲೇ ಮಾಜಿ ಆಗುತ್ತಾರೆ ಎಂದು ಸಚಿವ ಎಂಬಿ ಪಾಟೀಲ್ ಭವಿಷ್ಯ ನುಡಿದರು. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ 30 ರಿಂದ 35 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಿಂದೆ ಹೋದವರು ವಾಪಸ್ ಆಗ್ತಾರೆ. ಎಲ್ಲರೂ ಉದ್ಧವ್ ಠಾಕ್ರೆ ಬಳಿ ಹೋಗ್ತಾರೆ. ಎನ್ ಸಿಪಿ ಕಡೆಯೂ ಹೋಗ್ತಾರೆ. ಚುನಾವಣೆ ಮುಗಿದ ಒಂದು ತಿಂಗಳ ನಂತರ ಸರ್ಕಾರ ಬೀಳಲಿದೆ ಎಂದು ಭವಿಷ್ಯ ನುಡಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಕ್ಯಾನ್ಸರ್ ರೋಗಿಗಳಿಗೆ ಶುಭ ಸುದ್ದಿ: 72 ಲಕ್ಷ ರೂ. ನ ಕ್ಯಾನ್ಸರ್ ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ
ಮಹಾರಾಷ್ಟ್ರದಲ್ಲಿ 30 ರಿಂದ 40 ಶಾಸಕರು ನಮ್ಮ ಕಡೆ ಬರ್ತಾರೆ. ಶರತ್ ಪವಾರ್ ಇದ್ದಾರೆ,ಉದ್ಧವ್ ಠಾಕ್ರೆ ಇದ್ದಾರೆ. ಅವರನ್ನು ಇಲ್ಲಿಗೆ ನಾವ್ಯಾಕೆ ಕರೆತರೋಣ. ಅಲ್ಲಿ ಅಜಿತ್ ಪವಾರ್ ಅವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಹಾಗಾಗಿ ಅವರೂ ಬೇಜಾರುಗೊಂಡಿದ್ದಾರೆ. ವಾಪಸ್ ಶಿವಸೇನೆ ಶಾಸಕರು ಉದ್ಧವ್ ಬಳಿ ಹೋಗ್ತಾರೆ. ಮಹಾ ಘಟಬಂಧನ್ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದರು.
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಕರ್ನಾಟಕದಲ್ಲಿ ಸರ್ಕಾರ ಪತನದ ಬಗ್ಗೆ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ಸರ್ಕಾರ ಪತನ ಆಗಲಿದೆ ಎಂಬ ಭವಿಷ್ಯವನ್ನು ಕಾಂಗ್ರೆಸ್ ನಾಯಕರು ನುಡಿಯುತ್ತಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)