ಮಂಡ್ಯ :- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ದೂರು ಕಾಂಗ್ರೆಸ್ ಶಾಸಕ ಕೆ.ಎಂ.ಉದಯ್ ತಮ್ಮ ಸ್ವಗ್ರಾಮ ಕದಲೂರು ಗ್ರಾಮದಲ್ಲಿ ದಂಪತಿ ಸಮೇತ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಶಾಸಕ ಕೆ.ಎಂ.ಉದಯ್ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಚುನಾವಣೆಯಲ್ಲಿ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನತೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳಿಸುವ ಗುರಿ ಹೊಂದಲಾಗಿದೆ ಎಂದರು.
ಇನ್ನು ಜಿಲ್ಲೆಯ ಇತಿಹಾಸದಲ್ಲಿ ಕ್ಷೇತ್ರದ ಮತದಾರರು ಸ್ಥಳೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆಯೇ ಹೊರತು ಹೊರ ಜಿಲ್ಲೆಯವರನ್ನಲ್ಲ. ಜಿಲ್ಲೆಯ ಜನತೆ ಪ್ರಜ್ಞಾವಂತರು ಹಾಗೂ ಸ್ವಾಭಿಮಾನವನ್ನು ಎಂದಿಗೂ ಬಿಟ್ಟು ಕೊಡಲ್ಲ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರದೇ ಸರ್ಕಾರವಿದ್ದರೂ ಜೆಡಿಎಸ್ ಅಭ್ಯರ್ಥಿ ಹೊರ ಜಿಲ್ಲೆಯವರು ಎಂಬ ಕಾರಣಕ್ಕೆ ಜನತೆ ಕೈ ಹಿಡಿಯಲಿಲ್ಲ.
1 ಲಕ್ಷ ಮತಗಳ ಅಂತರದಿಂದ ಸಂಸದೆ ಸುಮಲತಾ ಅಂಬರೀಶ್ ಅವರು ಜಯಭೇರಿಗಳಿಸಿದ್ದರು. ಈ ಬಾರಿ ಮಗನನ್ನು ಬಿಟ್ಟು ತಂದೆಯೇ ಕಣಕ್ಕಿಳಿದಿದ್ದು, ನಮ್ಮ ಪಕ್ಷದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅತ್ಯಧಿಕ ಮತಗಳ ಅಂತರದಿಂದ ಜಯಶೀಲರಾಗುತ್ತಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಇನ್ನು ಇತ್ತಿಚೆಗೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ವಿರುದ್ಧ ಜೆಡಿಎಸ್ ಮುಖಂಡ ಡಾ.ರವೀಂದ್ರ ಉದಯ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕ ಉದಯ್ ಯಾರೋ ಕೆಲಸಕ್ಕೆ ಬಾರದ ಪಿಂಪ್ ಗಳು ಹೇಳಿಕೆ ನೀಡುತ್ತಾರೆ ಅಂತ ಪ್ರತಿಕ್ರಿಯೆ ನೀಡೋಕಾಗುತ್ತ. ಅವನೇನು ಗ್ರಾಪಂ ಸದಸ್ಯನ ಏನು ಅವನಿಗೇನು ಐಡೆಂಟಿಟಿ ಇದಿಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವರದಿ : ಗಿರೀಶ್ ರಾಜ್ ಮಂಡ್ಯ