ಕೆ.ಆರ್.ಪುರ: ಮಹದೇವಪುರ ಕ್ಷೇತ್ರದ ಮಂಡೂರು ಪಂಚಾಯತಿ ಹಂಚರಹಳ್ಳಿಯಲ್ಲಿ ನೂತನ ನ್ಯಾಷನಲ್ ಸೆಂಟರ್ ಫಾರ್ ಎಕ್ಸಲೆನ್ಸ್ ಮೂರನೇ ಶಾಖೆಯ ಶಾಲೆಯನ್ನು ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಉದ್ಘಾಟಿಸಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಉದ್ಘಾಟಿಸಿ ಮಾತನಾಡಿದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಅವರು ಖಾಸಗಿ ಶಿಕ್ಷಣ ಸಂಸ್ಥೆಗಳು ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ಶಿಕ್ಷಣವನ್ನು ನೀಡಿ ಭಾರತವನ್ನು ಪ್ರಮುಖ ಶಿಕ್ಷಣ ದೇಶವನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಳಿಗೆ ಉತ್ತಮ ಸಂವಹನ ಕೌಶಲ ಉದ್ಯೋಗ ಸ್ನೇಹಿ ಭವಿಷ್ಯಕ್ಕೆ ಪೂರಕ,ಹಾಗೇ ಭಾಷಾ ಜ್ಞಾನದ ಜೊತೆಗೆ ಅಭಿವ್ಯಕ್ತಿ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಾಲೆಗಳು ಒತ್ತು ನೀಡಬೇಕು ಆಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ನುಡಿದರು.
ಶಾಲೆಯ ಮಾಲೀಕ ಜನಾರ್ದನ ಗೌಡ ಅವರು ಮಾತನಾಡಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದರು.ಶಿಕ್ಷಣದ ಜೊತೆಜೊತೆಗೆ ಕ್ರೀಡೆ, ಸಾಂಸ್ಕೃತಿಕ ವಿಷಯಗಳಂತಹ ಪಠ್ಯೇತರ ಚಟುವಟಿಕೆಗಳಿಗೆ ಆಧ್ಯತೆ ನೀಡಲಾಗುತ್ತದೆ. ಗ್ರಾಮಾಂತರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಕೆಲಸಮಾಡಲಾಗುತ್ತೆ ಎಂದರು.
ಕಟ್ಟಡದ ಮಾಲೀಕರಾದ ಜನಾರ್ದನ ಗೌಡ,ಬಿಂದು ಜೆ ಗೌಡ, ಎನ್ಸಿಇ ಶಾಲೆಗಳ ಅಧ್ಯಕ್ಷ ಡಾ.ಎನ್.ವಿಜಯ್ ಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಟರಾಜ್, ಬಿದರಹಳ್ಳಿ ಪಂಚಾಯತಿ ಮಾಜಿ ಅಧ್ಯಕ್ಷ ಬಿ.ಜಿ.ರಾಜೇಶ್,ವರುಣ್ ಇದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)