ಬೆಂಗಳೂರು: ಉದ್ಯೋಗದಾತ ಸಂಸ್ಥೆಯು ತನ್ನ ಸಿಬ್ಬಂದಿಗೆ ಪಾವತಿಸಬೇಕಾದ ಭವಿಷ್ಯನಿಧಿ ಮೊತ್ತವನ್ನು ಸಿಬ್ಬಂದಿಯ ವೇತನದೊಂದಿಗೆ ಸೇರಿಸಿ ಪಾವತಿಸಿದಲ್ಲಿ ಅದು ಅಪರಾಧವಾಗುವುದಿಲ್ಲಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ದಾಸರಹಳ್ಳಿ ಶಾಸಕ ಮುನಿರಾಜು ಅವರ ಪುತ್ರಿ ಸ್ವಪ್ನ ಕಾರ್ಯದರ್ಶಿಯಾಗಿರುವ ಶ್ರೀ ಬಾಲಾಜಿ ಚಾರಿಟಬಲ್ ಟ್ರಸ್ಟ್ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತು
ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ. ಅಲ್ಲದೆ, ”ಸಿಬ್ಬಂದಿಯ ವೇತನದಿಂದ ಭವಿಷ್ಯ ನಿಧಿ ಮೊತ್ತವನ್ನು ಕಡಿತಗೊಳಿಸಿ ಭವಿಷ್ಯ ನಿಧಿ ಸಂಸ್ಥೆಗೆ ಪಾವತಿ ಮಾಡದಿದ್ದಲ್ಲಿ ಅಪರಾಧವಾಗಲಿದೆ.
![Demo](https://ainlivenews.com/wp-content/uploads/2023/12/spoorthi-1.jpg)
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಸಿಬ್ಬಂದಿಯ ಭವಿಷ್ಯ ನಿಧಿ ಮೊತ್ತವನ್ನು ವೇತನದೊಂದಿಗೆ ಪಾವತಿಸಿದ್ದು, ಯಾವುದೇ ಮೊತ್ತವನ್ನು ತಮ್ಮಲ್ಲಿ ಉಳಿಸಿಕೊಂಡಿಲ್ಲ. ಆ ಸಂಬಂಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ. ಆದ್ದರಿಂದ ಅರ್ಜಿದಾರರನ್ನು ನಂಬಿಕೆ ದ್ರೋಹದ ಆರೋಪದಲ್ಲಿ ವಿಚಾರಣೆಗೆ ಒಳಪಡಿಸಲು ಅವಕಾಶವಿಲ್ಲ,” ಎಂದು ನ್ಯಾಯಪೀಠ ತಿಳಿಸಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)