ಬೆಂಗಳೂರು: ಸಿಇಟಿ ಔಟ್ ಆಫ್ ಸಿಲಬಸ್ ವಿಚಾರವಾಗಿ ಈಗಾಗಲೇ ಸಾಕಷ್ಟು ಚರ್ಚೆಗಳಾಗಿದೆ. ಈ ವಿರುದ್ದ ಹಲವರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಸಹ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗುತ್ತಿದೆ. ಆದರೆ ಮುಂದೆ ಏನಾಯ್ತು ಎಂಬುದನ್ನು ನಾವು ನಿಮಗಿಲ್ಲಿ ನೀಡಿದ್ದೇವೆ ಗಮನಿಸಿ. ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟವೆನ್ನುವಂತೆ ಇದೀಗ ವಿದ್ಯಾರ್ಥಿಗಳ ಪರಿಸ್ಥಿತಿ ಆಗಿದೆ..
ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮುಂದೇನ ಎಂದು ತಲೆ ಕೆಡಿಸಿರೊಂಡಿದ್ದಾರೆ.. ಲಕ್ಷಾಂತರ ವಿದ್ಯಾರ್ಥಿಗಳ ಜೊತೆ ಕೆಇಎ ಚೆಲ್ಲಾಟವಾಡಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ತಜ್ಞರ ಸಮಿತಿ ವರದಿ ನೀಡಿದೆ. 50 ಪ್ರಶ್ನೆಗಳು ಔಟ್ ಆಫ್ ಸಿಲಬಸ್ ನಿಂದ ಬಂದಿದೆ ಎಂದು ತಿಳಿಸಲಾಗಿದೆ. ಈ ಪ್ರಶ್ನೆಗಳು ಗೊತ್ತೇ ಇಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತಾಗಿದೆ.
ಉದ್ಯೋಗ ಆಕಾಂಕ್ಷಿಗಳೇ ಗಮನಿಸಿ.. BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ ಇದೆ..! ಇಂದೇ ಅರ್ಜಿ ಸಲ್ಲಿಸಿ
ಇಷ್ಟಿದ್ರೂ ಸರ್ಕಾರ ಕೆಇಎ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕ್ತಿದೆ ಯಾಕೆ ಎಂಬ ಪ್ರಶ್ನೆ ಮೂಡುವಂತಾಗಿದೆ. ಈ ಕೂಡಲೇ ತಪ್ಪಿತಸ್ಥ ಅಧಿಕಾರಿಗಳ ಕ್ರಮ ಜರಿಗಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.ಸರ್ಕಾರಕ್ಕೆ ಎಬಿವಿಪಿ ಸಂಘಟನೆ ಪತ್ರ ಬರೆದು ಒತ್ತಾಯ ಮಾಡುತ್ತಾ ಇದೆ. ಕ್ರಮ ಕೈಗೊಳ್ಳದೇ ಹೋದ್ರೆ ಕೆಇಎ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಬಿವಿಪಿ ಎಚ್ಚರಿಕೆ ನೀಡಿದೆ.
ಸಿಇಟಿ ಕೌನ್ಸೆಲಿಂಗ್ ವಿಳಂಬವಾಗದಂತೆ ಸರ್ಕಾರ ಕ್ರಮ ವಹಿಸಬೇಕೆಂದು ಎಬಿವಿಪಿ ಆಗ್ರಹ ಮಾಡಲಿದೆ. ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಗೊಂದಲಕ್ಕೆ ಕಾರಣರಾಗಿರುವ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಮಾಡಿದ್ದಾರೆ. ಸಿಇಟಿ ಪರೀಕ್ಷೆಯಲ್ಲಿ ನಾಲ್ಕು ವಿಷಯದಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿದೆ.
ಸುಮಾರು 53 ಪಶ್ನೆಗಳು ಔಟ್ ಆಫ್ ಸಿಲಬಸ್ನಿಂದ ಬಂದಿದೆ ಎಂದು ಕೆಇಎ ಧೋರಣೆ ಬಗ್ಗೆ ನಿತಿನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ವಿದ್ಯಾರ್ಥಿಗಳು ಮೊದಲು ದೂರು ನೀಡಲಿ. ಆಮೇಲೆ ನೋಡೋಣ ಅನ್ನೋ ಕೆಇಎ ಧೋರಣೆ ಸರಿಯಲ್ಲ. ಅದರ ಬದಲಿಗೆ ಪರಿಣಿತರ ಸಮಿತಿ ರಚಿಸಿ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗುತ್ತಾ ಎಂದು ನೋಡಬೇಕು.. ಒಟ್ಟಾರೆ. ಒಂದು ಕಾಲದಲ್ಲಿ ಸಿಇಟಿ ದೇಶಕ್ಕೆ ಮಾದರಿಯಾಗಿತ್ತು. ಅಂತಹ ವ್ಯವಸ್ಥೆಯನ್ನ ಹಾಳುಮಾಡಿದ್ದಾರೆ. ಈ ವೈಫಲ್ಯಕ್ಕೆ ಕಾರಣರಾಗಿರುವ ಸಿಇಟಿ ನಿರ್ದೇಶಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.