ದೆಹಲಿ: ಭಾರತ (India) ದೇಶವಲ್ಲ. ನಾವು ಜೈ ಶ್ರೀರಾಮ್ (Jai Shree Ram) ಘೋಷಣೆಯನ್ನು ಒಪ್ಪಲ್ಲ ಎಂದು ಹಿಂದೂ ಧರ್ಮ ಮತ್ತು ಸನಾತನದ (Sanatan) ಬಗ್ಗೆ ಹೇಳಿಕೆ ನೀಡಿ ಡಿಎಂಕೆ (DMK) ಸಂಸದ ಎ.ರಾಜ (A.Raja) ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮಮತಾ ಸವಾಲು ಸ್ವೀಕಾರ: ಮಾರ್ಚ್ 7 ರಂದು ಬಿಜೆಪಿ ಸೇರಲಿರುವ ಕೋಲ್ಕತ್ತಾ ಹೈಕೋರ್ಟ್ ಜಡ್ಜ್
ಮಧುರೈನಲ್ಲಿ ಹಿಂದೂ ಧರ್ಮ ಮತ್ತು ಸನಾತನ ಧರ್ಮದ ಬಗ್ಗೆ ಮಾತನಾಡಿದ ಅವರು, ನಾವು ಶ್ರೀರಾಮನ ಶತ್ರುಗಳು. ನಾವು ರಾಮಾಯಣದಲ್ಲಿ ನಂಬಿಕೆಯನ್ನು ಇಟ್ಟುಕೊಳ್ಳದವರು. ಜೈ ಶ್ರೀರಾಮ್ ಎನ್ನುತ್ತಾರೆ, ‘ಛೀ’ ಎಂದು ಕಟುವಾಗಿ ಟೀಕಿಸಿದರು. ಅಲ್ಲದೇ ನಾವು ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಒಪ್ಪಲ್ಲ. ನಮಗೆ ರಾಮಾಯಣದಲ್ಲಿ ನಂಬಿಕೆ ಇಲ್ಲ ಎಂದು ಹೇಳಿದರು.
ದೇಶವೆಂದರೆ ಒಂದೇ ಭಾಷೆ ಮತ್ತು ಸಂಸ್ಕೃತಿಯನ್ನು ಒಳಗೊಂಡಿರುತ್ತದೆ. ಭಾರತದಲ್ಲಿ ಹಲವಾರು ಸಂಪ್ರದಾಯ ಮತ್ತು ಸಂಸ್ಕೃತಿಗಳಿವೆ. ಹಾಗಾಗಿ ಭಾರತ ದೇಶವಲ್ಲ. ಭಾರತ ಒಂದು ಉಪಖಂಡ. ತಮಿಳುನಾಡೇ ಒಂದು ದೇಶ, ಕೇರಳವೇ ಒಂದು ದೇಶ. ಒರಿಯಾವೇ ಒಂದು ದೇಶ, ಒಂದು ನಾಡು. ಈ ಎಲ್ಲಾ ದೇಶಗಳು ಸೇರಿ ಭಾರತವಾಗಿದೆ. ಹೀಗಾಗಿ ಭಾರತ ಒಂದು ಉಪಖಂಡ ಎಂದರು. ಅವರ ಈ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ
ಈ ಕುರಿತು ಬಿಜೆಪಿ ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ (Amit Malviya), ಡಿಎಂಕೆ ನಾಯಕ ಭಾರತದ ವಿಭಜನೆಗೆ ಕರೆ ನೀಡಿದ್ದು, ಭಗವಾನ್ ರಾಮನನ್ನು ಅಪಹಾಸ್ಯ ಮಾಡಿದ್ದಾರೆ. ಅಲ್ಲದೇ ಮಣಿಪುರಿಗಳ ಬಗ್ಗೆ ಅವಹೇಳನಾಕಾರಿ ಕಾಮೆಂಟ್ಗಳನ್ನು ಮಾಡಿ ಭಾರತದ ಪರಿಕಲ್ಪನೆಯನ್ನು ಪ್ರಶ್ನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.