ಟೆಹ್ರಾನ್: ಗಾಜಾ (Gaza) ಮೇಲಿನ ಇಸ್ರೇಲ್ (Israel) ದಾಳಿಗಳನ್ನು ಕೊನೆಗೊಳಿಸಲು ಭಾರತ ತನ್ನ ಎಲ್ಲಾ ಸಾಮರ್ಥ್ಯಗಳನ್ನು ಬಳಸಬೇಕು ಎಂದು ಪ್ರಧಾನಿ ಮೋದಿಗೆ (Narendra Modi) ಕರೆ ಮಾಡಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಒತ್ತಾಯಿಸಿದ್ದಾರೆ. ಮೋದಿ ಜೊತೆಗೆ ಫೋನ್ ಕರೆ ಮಾತುಕತೆ ವೇಳೆ ಇರಾನ್ (Iran) ಅಧ್ಯಕ್ಷ, ಪಾಶ್ಚಿಮಾತ್ಯ ವಸಾಹತುಶಾಹಿ ವಿರುದ್ಧ ಭಾರತದ ಹೋರಾಟಗಳು ಹಾಗೂ ವಿಶ್ವದ ಅಲಿಪ್ತ ಚಳವಳಿಯ ಸಂಸ್ಥಾಪಕರ ದೇಶವಾದ ಭಾರತದ ಸ್ಥಾನವನ್ನು ನೆನಪಿಸಿಕೊಂಡಿದ್ದಾರೆ.
“ದೀರ್ಘಕಾಲದ ಬೆನ್ನು ನೋವು” ಇಲ್ಲಿದೆ ಸರಳ ಚಿಕಿತ್ಸೆ: ಪರಿಹಾರ, ಉಚಿತ ಸಲಹೆ
ಗಾಜಾದ ತುಳಿತಕ್ಕೊಳಗಾದ ಜನರ ವಿರುದ್ಧ ಜಿಯೋನಿಸ್ಟ್ ಅಪರಾಧಗಳನ್ನು ಕೊನೆಗೊಳಿಸಲು ಭಾರತವು ತನ್ನೆಲ್ಲಾ ಸಾಮರ್ಥ್ಯ ಬಳಸುವ ನಿರೀಕ್ಷಿ ಇದೆ. ಕದನ ವಿರಾಮಕ್ಕಾಗಿ ಯಾವುದೇ ಜಾಗತಿಕ ಜಂಟಿ ಪ್ರಯತ್ನವನ್ನು ಟೆಹ್ರಾನ್ ಬೆಂಬಲಿಸುತ್ತದೆ. ಸಂಕಷ್ಟದಲ್ಲಿರುವ ಗಾಜಾದ ಜನರಿಗೆ ನೆರವು ನೀಡುತ್ತದೆ ಎಂದು ರೈಸಿ ತಿಳಿಸಿದ್ದಾರೆ. ಪ್ಯಾಲೆಸ್ತೀನ್ ಜನರ ಹತ್ಯೆಯು ಪ್ರಪಂಚದ ಎಲ್ಲಾ ಸ್ವತಂತ್ರ ರಾಷ್ಟ್ರಗಳನ್ನು ಕೆರಳಿಸಿದೆ. ಅಮಾಯಕ ಮಹಿಳೆಯರು ಮತ್ತು ಮಕ್ಕಳ ಹತ್ಯೆ, ಆಸ್ಪತ್ರೆಗಳು, ಶಾಲೆಗಳು, ಮಸೀದಿಗಳು, ಚರ್ಚ್ಗಳು ಮತ್ತು ವಸತಿ ಪ್ರದೇಶಗಳ ಮೇಲಿನ ದಾಳಿಗಳು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.