ಮಂಡ್ಯ :- ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಫಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ : ಕುಮಾರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ಸಮಿತಿಯಲ್ಲಿ ಇರುವ 15 ಲಕ್ಷ ರೂ ಅನುದಾನದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟ್ರಾಫಿಕ್ ಸಿಗ್ನಲ್ ಸರಿಪಡಿಸುವ ಕೆಲಸಗಳು, ಬ್ಲ್ಯಾಕ್ ಸ್ಪಾಟ್ ಗಳ ಬಳಿ ಸೂಚನಾ ಫಲಕಗಳು, ಹಂಪ್ ಗಳು ಸೇರಿದಂತೆ ಅವಶ್ಯಕ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳುವಂತೆ ತಿಳಿಸಿದರು.
Kumaraswamy: ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ.. ಹೆಚ್ ಡಿ ಕುಮಾರಸ್ವಾಮಿ
ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ ಅಪಘಾತ ತಡೆಗಟ್ಟಲು ಕೈಗೊಳ್ಳಬೇಕಿರುವ ಕ್ರಮ ಹಾಗೂ ಅದಕ್ಕೆ ತಗಲುವ ವೆಚ್ಚದ ವಿವರವನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿ ಅನುದಾನ ಕೋರಿ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.