ಬೆಂಗಳೂರು: ರಾಜ್ಯಗಳಿಗೆ ಶಕ್ತಿ ತುಂಬುವುದು ಬಿಟ್ಟು ಬಲವಂತವಾದ ಕಾನೂನು ಹೇರಲು ಹೊರಟಿದೆ ಎಂದು ಅಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಂಸದ ಡಿ.ಕೆ ಸುರೇಶ್ ಕಿಡಿಕಾರಿದ್ದಾರೆ. ಕೇಂದ್ರದ ತೆರಿಗೆ ಕಡಿತ ಮಾಡುವ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು,
ಈ ವಿಷಯ ಅಲ್ಲಲ್ಲಿ ಚರ್ಚೆ ಆಗುತ್ತಿದೆ. ಒಕ್ಕೂಟ ವ್ಯವಸ್ಥೆಯನ್ನು ದುರ್ಬಲ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯಗಳಿಗೆ ಶಕ್ತಿ ತುಂಬುವುದು ಬಿಟ್ಟು ಬಲವಂತವಾದ ಕಾನೂನು ಹೇರಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.
ಬೀಟ್ ರೂಟ್ ಸೇವಿಸುವುದರಿಂದ ನೀವು ದಪ್ಪ, ಉದ್ದ ಕೂದಲನ್ನು ಪಡೆಯಬಹುದು..!
ರಾಜ್ಯಗಳ ಅಭಿವೃದ್ಧಿ ಕುಂಠಿತಕ್ಕೆ ಕೇಂದ್ರ ಸರ್ಕಾರ ಯಾವ ರೀತಿ ಕಾರಣ ಆಗುತ್ತಿದೆ ನಾವು ನೋಡ್ತಾ ಇದ್ದೇವೆ. ರಾಷ್ಟ್ರ ಹಾಗೂ ರಾಜ್ಯದ ಜನರು ತಿರುಗಿ ಬೀಳಬಹುದು. ತೆರಿಗೆ ಹಣ ಕೊಡಿ ಎಂದು ನಾನು ಮನವಿ ಮಾಡ್ತೇನೆ.
ಜನಸಂಖ್ಯೆ ಆಧಾರದ ಮೇಲೆ ತೆರಿಗೆ ಹಣ ವಿಭಜನೆ ಆಗುತ್ತಿದೆ. ಮಹಿಳಾ ಮೀಸಲಾತಿ ಅನುಮೋದನೆ ಆಗಿದೆ. ಜಾತಿಗಣತಿ ಆಗುವ ಸಾಧ್ಯತೆ ಇದೆ. ಕ್ಷೇತ್ರಗಳನ್ನ ಜಾಸ್ತಿ ಮಾಡಿದರೆ, ಸಂಪೂರ್ಣವಾಗಿ ಉತ್ತರ ಭಾರತದ ಹಿಡಿತಕ್ಕೆ ಹೋಗುತ್ತದೆ. ಬಿಜೆಪಿ ನಾಯಕರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.