ಬೆಂಗಳೂರು:- ವಿಪಕ್ಷ ನಾಯಕ ಆರ್ ಅಶೋಕ್ ಅವರು ಬಿಜೆಪಿ ವಿರುದ್ಧ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಆಡು-ಕುರಿ ಇವೆರಡಕ್ಕೂ ಇರುವ ವ್ಯತ್ಯಾಸ ಏನು? ಎರಡರಲ್ಲಿ ಯಾವುದು ಬೆಸ್ಟ್?
ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ. ಒಂದು ಕಡೆ ಅಪಮಾನ ಮಾಡಿದರೆ, ಮತ್ತೊಂದು ಕಡೆ ಅವರಿಂದಲೇ ಸರ್ಕಾರಕ್ಕೆ ಮೆಚ್ಚುಗೆ ಹೇಳುವ ಮಾತನ್ನು ಆಡಿಸಲಾಗುತ್ತಿದೆ. ಇದನ್ನು ವಿರೋಧಿಸಿ ಬಿಜೆಪಿಯಿಂದ ಮಾ.3 ರಂದು ಪ್ರತಿಭಟಿಸಲಾಗುವುದು ಎಂದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಈ ಮಾತನ್ನು ಹೇಳುತ್ತಿದ್ದಾರೆ. ಇದರ ಜೊತೆಗೆ ಹಣ ಇಲ್ಲದೆ ಒಂದು ಲಕ್ಷ ಕೋಟಿ ರೂ. ಸಾಲ ಮಾಡಲಾಗುತ್ತಿದೆ. ಜನರ ಮೇಲೆ ತೆರಿಗೆ ಹೊರೆ ಹೇರಲಾಗುತ್ತಿದೆ. ಇದನ್ನು ಖಂಡಿಸಿ ಮಾ.7 ರಂದು ಶಾಸಕರ ಭವನದಿಂದ ವಿಧಾನಸೌಧಕ್ಕೆ ಪಾದಯಾತ್ರೆ ಹಾಗೂ ಪ್ರತಿಭಟನೆ ಮಾಡಲಾಗುವುದು ಎಂದು ಅಶೋಕ್ ತಿಳಿಸಿದರು.