ಸಾರ್ವಜನಿಕವಾಗಿ ಹೆಣ್ಣು ಮಕ್ಕಳಿಗೆ ಅಪಮಾನಿಸುತ್ತಿರುವುದು ಖಂಡನೀಯ – ಸಿದ್ದರಾಮಯ್ಯ

ಬೆಂಗಳೂರು:- ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸುತ್ತಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸುತ್ತಿರುವುದು ಖಂಡನೀಯ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ … Continue reading ಸಾರ್ವಜನಿಕವಾಗಿ ಹೆಣ್ಣು ಮಕ್ಕಳಿಗೆ ಅಪಮಾನಿಸುತ್ತಿರುವುದು ಖಂಡನೀಯ – ಸಿದ್ದರಾಮಯ್ಯ