ರಾಜ್ಯದಾದ್ಯಂತ ಸುಮಾರು 2.500 ಕಿ.ಮೀ ಉದ್ಧದ ಮಾನವ ಸರಪಳಿ ರಚಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೀಲೂರು ವರೆಗೆ ಸುಮಾರು 60 ಕಿ.ಮೀ ಮಾನವ ಸರಪಳಿ ನಿರ್ಮಾಣ ಮಾಡಲಾಗುತ್ತಿದೆ.
ಮಾನವ ಸರಪಳಿಯಲ್ಲಿ ನವ ವಿವಾಹಿತರು ಕೂಡ ಭಾಗಿಯಾಗಿದ್ದಾರೆ. ವಿವಾಹದ ನಂತರ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ಭಾಗಿಯಾಗಿದ್ದಾರೆ. ಸರಪಳಿ ನಿರ್ಮಾಣದಲ್ಲಿ ನವಜೋಡಿಯೊಂದು ಪಾಲ್ಗೊಂಡು ಗಮನ ಸೆಳೆಯಿತು. ಶಿವಮೊಗ್ಗ ಜಿಲ್ಲಾಡಳಿತದಿಂದ ಕೈಗೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನವಜೋಡಿಯೊಂದು ಪಾಲ್ಗೊಂಡಿತ್ತು.
Onam 2024: ಓಣಂ ಹಬ್ಬಆಚರಿಸುವ ವಿಧಾನ, ಹಿಂದಿನ ಮಹತ್ವ ಮತ್ತು ವಿಶೇಷತೆ ಏನು ಗೊತ್ತಾ..?
ವಿವಾಹದ ನಂತರ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ವಧು-ವರ ಭಾಗವಹಿಸಿದ್ದರು. ಮದುವೆ ಮಂಟಪದಿಂದ ಸೀದಾ ಬಂದು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜೋಡಿ ಭಾಗವಹಿಸಿತು. ಮಾನವ ಸರಪಳಿಯಲ್ಲಿ ಸರ್ಕಾರಿ ಶಾಲೆ, ಖಾಸಗಿ ಶಾಲೆ ಮಕ್ಕಳು ಮತ್ತು ಸರ್ಕಾರಿ ನೌಕರರು ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.