ಹಾಸನ: ಕೆಲವೇ ದಿನಗಳಲ್ಲಿ ಕೆಲವು ರಾಜಕೀಯ ಮುಖಂಡರು ಲೈನ್ನಲ್ಲಿ ನಿಲ್ಲುವ ಕಾಲ ಬರುತ್ತದೆ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ಹೊಳೆನರಸೀಪುದಲ್ಲಿ ಮಾತನಾಡಿದ ರೇವಣ್ಣ, ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ನನ್ನನ್ನು ಹೆದರಿಸಬೇಕು ಎಂದುಕೊಂಡಿದ್ದರೆ ಅದನ್ನು ಕನಸು ಎಂದು ತಿಳಿದುಕೊಳ್ಳಬೇಕಾಗುತ್ತದೆ.
ಮುಂದೆ ಒಂದಲ್ಲ ಒಂದು ದಿನ ರಿವರ್ಸ್ ಹೊಡೆಯುವ ಕಾಲ ಬರುತ್ತದೆ. ಇವತ್ತು ಯರ್ಯಾರು ಏನೇನು ಮಾಡಿದ್ದಾರೆ? ನಮ್ಮ ತಂದೆ-ತಾಯಿ ಕಣ್ಣೀರು ಹಾಕುವಂತೆ ಮಾಡಿದವರು ಅನುಭವಿಸುತ್ತಾರೆ. ಕೆಲವೇ ದಿನಗಳಲ್ಲಿ ಕೆಲವು ರಾಜಕೀಯ ಮುಖಂಡರು ಲೈನ್ನಲ್ಲಿ ನಿಲ್ಲುವ ಕಾಲ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಆಹಾರ ನಿಗಮದಲ್ಲಿದೆ ಭರ್ಜರಿ ಉದ್ಯೋಗವಕಾಶ.! ತಿಂಗಳಿಗೆ ₹ 71,000 ಸಂಬಳ – ಇಂದೇ ಅರ್ಜಿ ಸಲ್ಲಿಸಿ
ಹೆಚ್ಡಿ ಕುಮಾರಸ್ವಾಮಿ ಕೇಸ್ ಮತ್ತೇ ಓಪನ್ ಮಾಡಿಸಿದರ ಕುರಿತು ಮಾತನಾಡಿದ ಅವರು, ಕುಮಾರಣ್ಣರ ವಿರುದ್ಧ ಹತ್ತು ವರ್ಷದ ಕೇಸ್ ಇವತ್ತು ಮತ್ತೆ ಓಪನ್ ಮಾಡಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಅದನ್ನು ಕ್ಲೋಸ್ ಮಾಡಿಸಬಹುದಿತ್ತು. ಆ ಪಾಪದ ಕೆಲಸವನ್ನು ಅವರು ಮಾಡಲಿಲ್ಲ. ಕುಮಾರಣ್ಣ ನಲವತ್ತು ಜನ ಇಂಜಿನಿಯರ್ಗಳಿಗೆ ಪ್ರಮೋಷನ್ ಕೊಟ್ಟಿದ್ದಾರೆ.
ಈ ರಾಜ್ಯಕ್ಕೆ ಅವರ ಕೊಡುಗೆ ತುಂಬಾ ಇದೆ. ಯಾರಾದರೂ ಒಬ್ಬರು ಇಂಜಿನಿಯರ್ ಕುಮಾರಣ್ಣ, ರೇವಣ್ಣ ಐದು ರೂಪಾಯಿ ತಗೊಂಡಿದ್ದಾರೆ ಎಂದು ಹೇಳಿದರೆ ನಾನು ರಾಜಕೀಯ ಬಿಟ್ಟು ಹೋಗುತ್ತೇವೆ ಎಂದು ಹೇಳಿದರು. ಇವತ್ತು ಸರ್ಕಾರ ಯಾವ ಮಟ್ಟಕ್ಕಿದೆ? ಬಿಜೆಪಿ ಸರ್ಕಾರನಾ ನಲವತ್ತು ಪರ್ಸೆಂಟ್ ಅನ್ನೋರು ಈ ಜಿಲ್ಲೆಯೊಳಗೆ ಲೋಕೋಪಯೋಗಿ ಇಲಾಖೆಯಲ್ಲಿ 400 ಕೋಟಿ ರೂ. ಬಿಲ್ ಬಾಕಿ ಇದೆ. ಬಿಲ್ ತಗೊಬೇಕಾದರೆ 40% ದುಡ್ಡು ಬಾಕಿ ಇದೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು, ಮಾನ, ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.