ಬೆಂಗಳೂರು:- ತನಿಖಾಧಿಕಾರಿಗಳ ಪ್ರಶ್ನೆಗಳು ತಲೆಗೆ ಸುತ್ತಿಗೆಯಲ್ಲಿ ಹೊಡೆದಂತಾಗಿದೆ ಎಂದು ಜಡ್ಜ್ ಮುಂದೆ ನಟಿ ರನ್ಯಾ ಹೈಡ್ರಾಮ ಮಾಡಿದ್ದಾರೆ.
ಲವ್ ಜಿಹಾದ್ಗೆ ಬಲಿಯಾಗಬೇಡಿ, ಅನ್ಯ ಧರ್ಮದ ಯುವತಿಯರನ್ನ ಪ್ರೀತಿಸಿ: ಸೂಲಿಬೆಲೆ!
ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ನಟಿ ರನ್ಯಾ ರಾವ್ಗೆ ಮಾರ್ಚ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಕೋರ್ಟ್ ಆದೇಶಕ್ಕೂ ಮುನ್ನ ನಟಿಯನ್ನು ತೀವ್ರವಾಗಿ ವಿಚಾರಣೆ ನಡೆಸಲಾಯಿತು. ಈ ವೇಳೆ ಜಡ್ಜ್ ಮುಂದೆ ನಟಿ ಕಣ್ಣೀರಿಟ್ಟು ಗೋಳಾಡಿದರು.
ತನಿಖಾಧಿಕಾರಿಗಳ ಸರಣಿ ಪ್ರಶ್ನೆಗಳಿಗೆ ತತ್ತರಿಸಿರುವ ನಟಿ ರನ್ಯಾ ರಾವ್ ಮಾತು ಮಾತಿಗೂ ಕಣ್ಣೀರು ಇಡ್ತಿದ್ದಾರಂತೆ.. ಏನೇ ಪ್ರಶ್ನೆ ಕೇಳಿದ್ರೂ ಸರಿಯಾಗಿ ಉತ್ತರ ಕೊಡದ ರನ್ಯಾರಾವ್, ನನ್ನನ್ನು ಈ ಕೇಸ್ ನಲ್ಲಿ ಸಿಲುಕಿಸಲಾಗಿದೆ. ಈ ಹಿಂದೆ ಯಾವತ್ತೂ ಚಿನ್ನ ಸಾಗಟ ಮಾಡಿಲ್ಲ.. ನಂಗೇನು ಗೊತ್ತಿಲ್ಲ ಅಂತಷ್ಟೇ ಹೇಳ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ವಿಚಾರಣೆ ವೇಳೆ ತೊಂದ್ರೆ ಕೊಡ್ತಿದ್ದಾರಾ? ಹಿಲ್ ಟ್ರೀಟ್ಮೆಂಟ್ ಕೊಟ್ಟಿದ್ದಾರಾ..? ಎಂದು ಜಡ್ಜ್ ಕೇಳಿದ್ದಕ್ಕೆ ಕಣ್ಣೀರಿಡುತ್ತಲೇ ಉತ್ತರಿಸಿದ ರನ್ಯಾ, ಮಾನಸಿಕವಾಗಿ ಬಹಳ ಹಿಂಸೆ ನೀಡಿದ್ದಾರೆ. ನಿನಗೆ ಇದ್ರಿಂದ ಏನಾಗುತ್ತೆ ಗೊತ್ತಾ ಅಂತ ಭಯ ಬೀಳಿಸಿದ್ದಾರೆ. ಸತ್ಯ ಒಪ್ಪಿಕೋ ಅಂತ ಹೆದರಿಸುತ್ತಿದ್ದಾರೆ. ತಲೆಗೆ ಸುತ್ತಿಗೆಯಲ್ಲಿ ಹೊಡೆದಂತೆ ಪ್ರಶ್ನೆ ಕೇಳ್ತಾರೆ, ಕೆಟ್ಟದಾಗಿ ಬೈಯ್ದಿದ್ದಾರೆ, ನಾನು ಏನು ಮಾಡಿಲ್ಲ ಅಂದ್ರು ಹಿಂಸೆ ಕೊಡ್ತಿದ್ದಾರೆ ಎಂದು ಗಳಗಳನೆ ಕಣ್ಣೀರಿಟ್ಟಿದ್ದಾರೆ.