ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ನಡೆಯಲಿದೆ. ಈ ಪಂದ್ಯವು ಆರ್ಸಿಬಿ ಪಾಲಿಗೆ ನಿರ್ಣಾಯಕ.
ಸಿಲಿಕಾನ್ ಸಿಟಿಯಲ್ಲಿ ಕಿಡ್ನಿ ಸಮಸ್ಯೆ ಹೆಚ್ಚಳ – ಆಸ್ಪತ್ರೆ ದಾಖಲಾಗುವವರ ಸಂಖ್ಯೆ ದುಪ್ಪಟ್ಟು..!
ಏಕೆಂದರೆ ಆರ್ಸಿಬಿ ಆಡಿರುವ 10 ಪಂದ್ಯಗಳಲ್ಲಿ 7 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ರೇಸ್ನಲ್ಲಿ ಉಳಿಯಬೇಕಿದ್ದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಅಲ್ಲದೆ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದರೆ ಅಂಕ ಪಟ್ಟಿಯಲ್ಲೂ ಮೇಲೇರಬಹುದು. ಒಂದು ವೇಳೆ ಇಂದು ಭರ್ಜರಿ ಜಯ ಸಾಧಿಸುವಲ್ಲಿ ಯಶಸ್ವಿಯಾದರೆ ಆರ್ಸಿಬಿ ತಂಡವು ಪಾಯಿಂಟ್ಸ್ ಟೇಬಲ್ನಲ್ಲಿ 7ನೇ ಅಥವಾ 8ನೇ ಸ್ಥಾನಕ್ಕೇರಲಿದೆ. ಅಂಕ ಪಟ್ಟಿಯಲ್ಲಿನ ಜಿಗಿತದೊಂದಿಗೆ ಆರ್ಸಿಬಿ ತಂಡವು ಪ್ಲೇಆಫ್ ರೇಸ್ನಲ್ಲಿ ಉಳಿದುಕೊಳ್ಳಬಹುದು.
ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ತಂಡದ ಪಾಲಿಗೂ ಈ ಪಂದ್ಯ ತುಂಬಾ ಮಹತ್ವದ್ದು. ಶುಭ್ಮನ್ ಗಿಲ್ ಪಡೆ 10 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 4 ಮ್ಯಾಚ್ಗಳಲ್ಲಿ ಮಾತ್ರ. ಇದೀಗ ಅಂಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಪ್ಲೇಆಫ್ ಆಸೆಯನ್ನು ಜೀವಂತವರಿಸಿಕೊಳ್ಳಲು ಆರ್ಸಿಬಿ ವಿರುದ್ಧ ಗೆಲ್ಲಲೇಬೇಕು. ಹೀಗಾಗಿ ಈ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.