ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಆರ್ಸಿಬಿ- ಕೆಕೆಆರ್ ಪಂದ್ಯ ನಡೆಯಲಿದ್ದು, ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಹಳೆಯ ತಪ್ಪುಗಳನ್ನು ಸರಿಪಡಿಸಿಕೊಂಡು ಕಣಕ್ಕಿಳಿಯುವ ಇರಾದೆಯಲ್ಲಿವೆ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಸಮತಟ್ಟಾಗಿದ್ದು ಬ್ಯಾಟಿಂಗ್ಗೆ ಅನುಕೂಲಕರವಾಗಿದೆ. ಆದರೆ ವೇಗಿಗಳು ಹೊಸ ಚೆಂಡಿನೊಂದಿಗೆ ಹೆಚ್ಚು ಲಾಭ ಪಡೆಯಲ್ಲಿದ್ದಾರೆ. ಅದಾಗ್ಯೂ ಪವರ್ಪ್ಲೇಯಲ್ಲಿ ಹೆಚ್ಚು ರನ್ ಹರಿಯುವ ಸಾಧ್ಯತೆಗಳಿವೆ. ಏಕೆಂದರೆ ಚಿನ್ನಸ್ವಾಮಿ ಕ್ರೀಡಾಂಗಣ ಚಿಕ್ಕದಾಗಿರುವುದರಿಂದ ಹೆಚ್ಚು ಬೌಂಡರಿ ಮತ್ತು ಸಿಕ್ಸರ್ಗಳು ಸಿಡಿಯುವ ಸಾಧ್ಯತೆಗಳಿವೆ. ಈ ಹಿಂದೆ ನಡೆದ ಪಂದ್ಯಗಳೇ ಇದಕ್ಕೆ ಉದಾಹರಣೆಯಾಗಿದೆ.
Mandya: ನ್ಯಾಯಾಲಯದ ಆದೇಶ ಪಾಲಿಸದ ಮರಳಿಗ ಗ್ರಾಮ ಪಂಚಾಯಿತಿ ಕಛೇರಿ ಜಪ್ತಿ!
ಕೆಕೆಆರ್ಗೂ ಮುನ್ನ ಬೆಂಗಳೂರಿನಲ್ಲಿ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ 177 ರನ್ಗಳ ಗುರಿಯನ್ನು ಬೆನ್ನಟ್ಟುವ ವೇಳೆ ತಂಡದ ಬ್ಯಾಟಿಂಗ್ ವಿಭಾಗ ಕುಸಿದಿತ್ತು. ಆದರೆ ಏಕಾಂಗಿ ಹೋರಾಟ ನಡೆಸಿದ ವಿರಾಟ್ ಕೊಹ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಕೊಹ್ಲಿ ಹೊರತಾಗಿ ನಾಯಕ ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮರೂನ್ ಗ್ರೀನ್ ಮತ್ತು ರಜತ್ ಪಾಟಿದಾರ್ ಅವರಿಂದ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸಲಾಗಿದೆ.
ಇತ್ತ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್ ಮತ್ತು ನಿತೀಶ್ ರಾಣಾ ಅವರ ಬ್ಯಾಟ್ನಿಂದ ಉತ್ತಮ ಇನ್ನಿಂಗ್ಸ್ ಬರಬೇಕಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಇವರುಗಳ ಬ್ಯಾಟ್ ಸೈಲೆಂಟ್ ಆಗಿತ್ತು. ಆದರೆ ತಂಡದ ಕೆಳಕ್ರಮಾಂಕ ಬಲಿಷ್ಠವಾಗಿದ್ದು, ರಮಣದೀಪ್ ಸಿಂಗ್, ರಿಂಕು ಸಿಂಗ್ ಮತ್ತು ಆಂಡ್ರೆ ರಸೆಲ್ ಆರು, ಏಳು ಮತ್ತು ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದರು.