ವಿಜಯಪುರ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಕಿಡಿ ಕಾರಿರುವ ಸಚಿವ ಎಂ. ಬಿ. ಪಾಟೀಲ, ಮೊದಲು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯನ್ನು ಬಿಜೆಪಿ ಕೇಳಲಿ ಎಂದು ಸವಾಲು ಹಾಕಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸಿಎಂ ಸಿದ್ದರಾಮಯ್ಯ ಅವರದ್ದು ತಪ್ಪು ಏನಿದೆ? ಪ್ರಾಥಮಿಕ ತನಿಖೆಯನ್ನು ನಾವು ಚಾಲೆಂಜ್ ಮಾಡ್ತೀವಿ. ಯಾವುದಾದರೂ ಫೈಲ್ ಗೆ ಸಿದ್ದರಾಮಯ್ಯ ಅವರದ್ದು ಸಹಿ ಇದೆಯೇ? ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏನೂ ಆಗಲ್ಲ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಅವರ ಬಗ್ಗೆ ಪ್ರಾಥಮಿಕ ತನಿಖೆಯಾಗಲಿ ಎಂದು ಅನುಮತಿ ಕೊಟ್ಟಿದ್ದಾರೆಯೇ ಎಂದು ಎಂ. ಬಿ. ಪಾಟೀಲ್ ಪ್ರಶ್ನಿಸಿದರು.
ನಿಮ್ಮ ಬಳಿ ಒಂದಕ್ಕಿಂತ ಹೆಚ್ಚು Pan Card ಇದ್ರೆ ಏನಾಗುತ್ತೆ ಗೊತ್ತಾ.? ಎಷ್ಟು ದಿನ ಜೈಲು ಶಿಕ್ಷೆ.? ದಂಡ ಎಷ್ಟು.?
ಮೊದಲು ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ಕೊಡಿಸಿ ಎಂದು ಬಿಜೆಪಿಗರಿಗೆ ಸವಾಲು ಹಾಕಿದ ಸಚಿವ ಎಂ. ಬಿ. ಪಾಟೀಲ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಲ್ಲ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೂ ಪ್ರತಿಕ್ರಿಯೆ ನೀಡಿದರು. ತಾವು ರಾಜೀನಾಮೆ ಕೊಡಬೇಕಾಗುತ್ತದೆಂದು ಆ ರೀತಿ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.